ಖೋಟು ನೋಟು ಚಲಾವಣೆ ಮಾಡ್ತಿದ್ದ ಆರೋಪಿಗಳ ಬಂಧನ

Webdunia
ಗುರುವಾರ, 26 ಜನವರಿ 2023 (15:14 IST)
ಖೋಟಾನೋಟು ಮುದ್ರಿಸಿ ರಾಜಧಾನಿಯಲ್ಲಿ ಚಲಾವಣೆಗೆ ಯತ್ನಿಸುತ್ತಿದ್ದ ನಾಲ್ವರು ಅಂತಾರಾಜ್ಯ‌ ಆರೋಪಿಗಳನ್ನ ಸುಬ್ರಮಣ್ಯಪುರ ಪೊಲೀಸರು ಬಂಧಿಸಿ 11 ಲಕ್ಷ ಮೌಲ್ಯದ ನಕಲಿ ನೋಟುಗಳನ್ನು ವಶಕ್ಕೆ ಪಡೆದ್ರೆ. ಮತ್ತೊಂದು ಕಡೆ ಗಾಂಜಾ ಮಾರಾಟ ಮಾಡುತ್ತಿದ್ದ ಖರ್ತನಾಕ್‌ ಗ್ಯಾಂಗ್ ನ್ನ ಖಾಕಿ ಪಡೆ ಅರೆಸ್ಟ್ ಮಾಡಿದ್ದಾರೆ.

ಆಂಧ್ರಪ್ರದೇಶದ ಕಡಪ ಜಿಲ್ಲೆಯ ಚರಣ್ ಸಿಂಗ್, ಪುಲ್ಲಲರೇವು, ರಾಜ ಹಾಗೂ ಗೋಪಿನಾಥ್ ಬಂಧಿತ ಆರೋಪಿಗಳು ಬಂಧಿತರಿಂದ 500 ಮುಖಬೆಲೆಯ 11 ಲಕ್ಷ ರೂಪಾಯಿ ನಕಲಿ ಹಣ,  ಖೋಟಾನೋಟು ಪ್ರಿಂಟ್ ಮಾಡುವ ಉಪಕರಣಗಳನ್ನ‌ ವಶಕ್ಕೆ‌ ಪಡೆದುಕೊಳ್ಳಲಾಗಿದೆ.‌ ಇದೇ ತಿಂಗಳು ಜನವರಿ 19 ರ ಮಧ್ಯಾಹ್ನ ಉತ್ತರಹಳ್ಳಿ‌ ಪೂರ್ಣಪ್ರಜ್ಞಾ ಲೇಔಟ್ ಬಳಿ ನಕಲಿ ನೋಟು ಚಲಾವಣೆಗೆ  ಯತ್ನಿಸುತ್ತಿದ್ದ ಮಾಹಿತಿ‌‌ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದಾಗ 500 ರೂಪಾಯಿ ಮೌಲ್ಯದ 8 ಕಂತೆಗಳಲ್ಲಿ 818 ನೋಟುಗಳಿರುವ 4 ಲಕ್ಷ ಮೌಲ್ಯದ ನೋಟು ಜಪ್ತಿ ಮಾಡಿತ್ತು. ವಿಚಾರಣೆ ವೇಳೆ ಅನಂತಪುರದಲ್ಲಿ ನೋಟು ತಯಾರಿಸುವ ಜಾಗದ ಬಗ್ಗೆ ಆರೋಪಿಗಳು ನೀಡಿದ ಮಾಹಿತಿ ಮೇರೆಗೆ ಸ್ಥಳಕ್ಕೆ ಹೋಗಿ 6.25 ಲಕ್ಷ ಮೌಲ್ಯದ ನಕಲಿ ನೋಟು ಜಪ್ತಿ ಮಾಡಿದ್ದಾರೆ.
ಮತ್ತೊಂದು ಪ್ರಕರಣದಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ದಂಧೆಕೋರರನ್ನು ಬಸವನಗುಡಿ ಪೊಲೀಸರು ಬಂಧಿಸಿದ್ದಾರೆ.ನಾಗರಾಜ್ ಹಾಗೂ ನೋಗರಾಜ್ ಎಂಬುವರನ್ನು ಬಂಧಿಸಿ 44 ಲಕ್ಷ ಬೆಲೆಯ 116 ಕೆ.ಜಿ. ಗಾಂಜಾ ವಶಪಡಿಸಿಕೊಂಡ ವಶಕ್ಕೆ ಪಡೆದುಕೊಂಡಿದ್ದಾರೆ. ಆಂಧ್ರಪ್ರದೇಶದ ಕರಾವಳಿ ಭಾಗವಾಗಿರುವ ವಿಶಾಖಪಟ್ಟಣದಿಂದ ಗಾಂಜಾ ತರಿಸಿ‌ ಮಾರಾಟ ಮಾಡಲು ಆರೋಪಿಗಳು ಪ್ಲ್ಯಾನ್ ಮಾಡಿದ್ದರು.‌ ಇದರಂತೆ‌ ಲಕ್ಷಾಂತರ ಮೌಲ್ಯದ ಮಾದಕವಸ್ತು ತರಿಸಿಕೊಂಡು ನಗರದಲ್ಲಿ ಮಾರಾಟ ಮಾಡಲು ಯತ್ನಿಸುವಾಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಬಂಧಿತರಿಂದ ಹಣ ಹಾಗೂ ಗಾಂಜಾ ಎರಡು ಮೊಬೈಲ್ ಪೋನ್ ವಶಕ್ಕೆ‌ ಪಡೆದುಕೊಂಡು ಬಸವನಗುಡಿ ಪೊಲೀಸರು  ತನಿಖೆ ಚುರುಕುಗೊಳಿಸಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕ್ಲೈಮ್ಯಾಕ್ಸ್‌ ಹಂತ ತಲುಪಿದ ಧರ್ಮಸ್ಥಳ ಬುರುಡೆ ಕೇಸ್‌: ಎಸ್‌ಐಟಿ ಚಾರ್ಜ್‌ಶೀಟ್‌ನತ್ತ ಎಲ್ಲರ ಚಿತ್ತ

Karur Stampede: ಸ್ವತಂತ್ರ ತನಿಖೆ ಕೋರಿ ಸುಪ್ರೀಂ ಕೋರ್ಟ್‌ ಕದ ತಟ್ಟಿದ ನಟ ವಿಜಯ್‌ ಪಕ್ಷ

ಪಟಾಕಿ ಕಾರ್ಖಾನೆಯಲ್ಲಿ ಮತ್ತೊಂದು ದುರಂತ: ಸ್ಫೋಟ ಸಂಭವಿಸಿ ಆರು ಮಂದಿ ಕಾರ್ಮಿಕರು ಸಜೀವ ದಹನ

ಪಾಕ್‌ನಲ್ಲಿ ರಕ್ತದೋಕುಳಿ: ಎನ್‌ಕೌಂಟರ್‌ ವೇಳೆ 11 ಯೋಧರು ಸೇರಿ 30 ಮಂದಿ ಸಾವು

ಕಮಲದ ವಿನ್ಯಾಸದಲ್ಲಿ ತಯಾರಾದ ಮುಂಬೈನ ಹೊಸ ವಿಮಾನ ನಿಲ್ದಾಣ ಉದ್ಘಾಟಿಸಿದ ಮೋದಿ

ಮುಂದಿನ ಸುದ್ದಿ
Show comments