Webdunia - Bharat's app for daily news and videos

Install App

ಮಂಡ್ಯದ ‘ಕೈ’ ಮುಖಂಡನ ಬಂಧನ

Webdunia
ಬುಧವಾರ, 11 ಮೇ 2022 (18:28 IST)
545 ಪಿಎಸ್ಐ ಹುದ್ದೆಗಳ ನೇಮಕಾತಿಯಲ್ಲಿ ನಡೆದ ಅಕ್ರಮದ ಬಗ್ಗೆ ಸಿಐಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆಯಲ್ಲಿ ಕಲಬುರಗಿ ಜೊತೆ ಬೇರೆ ಬೇರೆ ಜಿಲ್ಲೆಗಳಲ್ಲೂ ಅಕ್ರಮ ನಡೆದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಇನ್ನು ಈ ಅಕ್ರಮಕ್ಕೆ ಸಂಬಂಧಿಸಿ ಮಂಡ್ಯದ ಮಾಜಿ ಸಚಿವರ ಆಪ್ತನನ್ನು ಬಂಧಿಸಲಾಗಿದೆ..ಶ್ರವಣಬೆಳಗೊಳ ಪಿಎಸ್‌ಐ ಪರವಾಗಿ ಅಕ್ರಮವೆಸಗಿರುವ ಆರೋಪದಡಿ ಶರತ್ ರಾಮಣ್ಣ ಎಂಬಾತನನ್ನು ಸಿಐಡಿ ಪೊಲೀಸರು ಅರೆಸ್ಟ್ ಮಾಡಿದ್ದು, ಶರತ್ ಮಂಡ್ಯ ಜಿಲ್ಲೆಯ ನಾಗಮಂಗಲದವನಾಗಿದ್ದಾನೆ.. ಈತ ಮಾಜಿ ತಾಲೂಕು ಯೂತ್ ಕಾಂಗ್ರೆಸ್ ಅಧ್ಯಕ್ಷ, ಮಾಜಿ ಸಚಿವ ಎನ್ ಚಲುವರಾಯಸ್ವಾಮಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು...ಶರತ್ ರಾಮಣ್ಣ ಪಿಎಸ್‌ಐ ಕೆಲಸದ ವಿಚಾರದಲ್ಲಿ ಮಧ್ಯವರ್ತಿಯಾಗಿದ್ದರು. ಪರೀಕ್ಷೆ ಮುಗಿದ ಬಳಿಕ ನೇಮಕಾತಿ ವಿಭಾಗದ ಸ್ಟ್ರಾಂಗ್‌ ರೂಮ್‌ನಲ್ಲಿದ್ದ ಕೆಲ ಅಭ್ಯರ್ಥಿಗಳ OMR ಶೀಟ್‌ಗಳನ್ನು ಈ ಆರೋಪಿಗಳು ತಿದ್ದಿದ್ದಾರೆ. ಇದಕ್ಕೆ ತಲಾ ಅಭ್ಯರ್ಥಿಯಿಂದ 30-40 ಲಕ್ಷ  ವಸೂಲಿ ಮಾಡಿದ್ದಾರೆ ಎನ್ನಲಾಗ್ತಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments