Webdunia - Bharat's app for daily news and videos

Install App

ಶ್ರೀಲಂಕಾದ ಪಾತಕಿಗಳಿಗೆ ಹಣದ ನೆರವು ನೀಡುತ್ತಿದ್ದವರು ಅರೆಸ್ಟ್

Webdunia
ಶುಕ್ರವಾರ, 25 ಆಗಸ್ಟ್ 2023 (19:00 IST)
ಶ್ರೀಲಂಕಾದ ಮೋಸ್ಟ್ ವಾಂಟೆಡ್ ಆರೋಪಿಗಳಿಗೆ ಹಣ ಸಹಾಯ ಇಬ್ಬರನ್ನ ಸಿಸಿಬಿ ಅಧಿಕಾರಿ ಗಳು  ಅರೆಸ್ಟ್ ಮಾಡಿ ವಿಚಾರಣೆ ಮುಂದುವರೆಸಿದ್ದಾರೆ ಸಾಕಷ್ಟು ಸ್ಪೋಟಕ ವಿಷಯಗಳು ಒಂದೊಂದಾಗಿ ಹೊರ ಬರುತ್ತಿದ್ದು ಕ್ರಿಮಿನಲ್ ಗಳ ಬೆನ್ನಿಗೆ ನಿಂತವರ ಜನ್ಮ ಜಾಲ ಜಾಲಾಡುತ್ತಿದ್ದಾರೆ.ಚೆನೈ ಮೂಲದ ಮನ್ಸೂರ್ ಮತ್ತು ಬೆಂಗಳೂರಿನ ವಿವೇಕ ನಗರದ ಅನ್ಬು ಬಂಧಿತ ಆರೋಪಿಗಳು. ಮನ್ಸೂರ್ ಬಳಿ  57 ಲಕ್ಷ ನಗದು,1.5 ಕೋಟಿ ಡಿ.ಡಿ ವಶಕ್ಕೆ ಪಡೆಯಲಾಗಿದೆ.ಬಂಧಿತ ಆರೋಪಿಗಳಿಗೆ ಬೆಂಗಳೂರಿನಲ್ಲಿ ನೆಲೆಸಲು ಅಗತ್ಯ ಖರ್ಚು ವೆಚ್ಚವೆಂದು ಸುಮಾರು 57 ಲಕ್ಷ ರೂ ಹೊಂದಿಸಿದ್ದ ಮನ್ಸೂರ್, ಕೆಲವೇ ದಿನಗಳಲ್ಲಿ ಆ ಹಣವನ್ನು ಆರೋಪಿಗಳಿಗೆ ತಲುಪಿಸಲು ಸಿದ್ದವಾಗಿದ್ದ.ಹಣ ಕೈ ಸೇರಿದ ಬಳಿಕ ಬೆಂಗಳೂರಿನಿಂದ ಇತರೆಡೆಗೆ ತೆರಳಲು ಆರೋಪಿಗಳು ಸಿದ್ಧರಾಗಿದ್ದರು
ಆರೋಪಿಗಳು ಸಮುದ್ರ ಮಾರ್ಗ ಬಳಸಿ ಬೆಂಗಳೂರಿಗೆ ಬರಲು ನೆರವಾಗಿದ್ದ ಜಲಾಲ್ ನ ಮಾರ್ಗದರ್ಶನದಂತೆ ಮನ್ಸೂರ್ ಕೆಲಸ ನಿರ್ವಹಿಸುತ್ತಿದ್ದ. ಒಮಾನ್ ನಲ್ಲಿದ್ದ ಜಲಾಲ್, ಬೆಂಗಳೂರಿನಲ್ಲಿರುವ ಆರೋಪಿಗಳಿಗೆ 50 ಲಕ್ಷ ರೂ ನೀಡುವಂತೆ ಮನ್ಸೂರ್ ಗೆ ಸೂಚಿಸಿದ್ದ. ಅದರಂತೆ ಬೆಂಗಳೂರಿಗೆ ಬಂದಿಳಿದಿದ್ದ ಶ್ರೀಲಂಕಾ ಮೂಲದ ಆರೋಪಿಗಳಿಗೆ ಹಣ ನೀಡಲು ಮನ್ಸೂರ್ ಸಿದ್ಧವಾಗಿದ್ದ. 

ಇತ್ತ ಅನ್ಬು ಬೆಂಗಳೂರಿನಲ್ಲಿ ಪಾಸ್‌ಪೋರ್ಟ್ ಸಿದ್ಧಪಡಿಸಿ ಕೊಡುವ ಕೆಲಸಕ್ಕೆ ನಿಯೋಜನೆಯಾಗಿದ್ದ.ಅದಕ್ಕೆ ಬೇಕಾದ ದಾಖಲೆಗಳನ್ನ ಸಿದ್ಧಪಡಿಸುತ್ತಿದ್ದ ಆತನನ್ನ ಬಂಧಿಸಲಾಗಿದೆ. ಹಣ ಪಡೆದು ನೇಪಾಳದಲ್ಲಿರುವ ಸಂಜೀವ್ ಎಂಬಾತನ ಜೊತೆ ಸೇರಿಕೊಳ್ಳಲು ಆರೋಪಿಗಳು ಸಿದ್ಧವಾಗಿದ್ದರು. ಸಂಜೀವ್ ಜೊತೆ ಆರೋಪಿಗಳು ಸಿಂಹಳೀಯ ಭಾಷೆಯಲ್ಲಿ ನಡೆಸಿರುವ ಮೊಬೈಲ್ ಸಂಭಾಷಣೆ ಸಹ ಪತ್ತೆಯಾಗಿದೆ ಮತ್ತು ಬಂಧಿತರಿಗೆ ಸಿಂಹಳೀಯ ಭಾಷೆ ಮಾತ್ರವೇ ತಿಳಿದಿದೆ.

 ಆದ್ದರಿಂದ ಭಾಷಾಂತರಿಸುವವರ ನೆರವು ಪಡೆಯಲಾಗುತ್ತಿದೆ ಎಂದು ಸಿಸಿಬಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಶ್ರೀಲಂಕಾದಲ್ಲಿ ಕೊಲೆ, ಗ್ಯಾಂಗ್ ವಾರ್ ನಂತಹ ಕೃತ್ಯಗಳಲ್ಲಿ ಭಾಗಿಯಾಗಿ, ಬೆಂಗಳೂರಿಗೆ ಬಂದು ಅಕ್ರಮವಾಗಿ ನೆಲೆಸಿದ್ದ ಕಸನ್ ಕುಮಾರ್ ಸಂಕ  ಅಮಿಲಾ ನುವಾನ್ ಅಲಿಯಾಸ್ ಗೋತಾ ಸಿಲ್ವಾ  ರಂಗಪ್ರಸಾದ್ ಅಲಿಯಾಸ್ ಚುಟ್ಟಾ  ಹಾಗೂ ಆರೋಪಿಗಳಿಗೆ ಬೆಂಗಳೂರಿನಲ್ಲಿ ನೆಲೆಸಲು ಆಶ್ರಯ ನೀಡಿದ್ದ ಜೈ ಪರಮೇಶ್ ಎಂಬಾತನನ್ನ ಗುರುವಾರ ಸಿಸಿಬಿ ಪೊಲೀಸರು ಬಂಧಿಸಿದ್ದರು.ಒಟ್ಟಿನಲ್ಲಿ ಸಿಸಿಬಿ ಅಧಿಕಾರಿಗಳು ಪಾತಾಕಿಗಳಿಗೆ ನೆರವು‌ ನೀಡಿದ್ದ ಆರೋಪಿಗಳನ್ನ‌ ಹೆಡೆಮುರಿ‌ಕಟ್ಟಲು ರೆಡಿಯಾಗಿದ್ದಾರೆ ಅಲ್ದೆ ಇನ್ನೂ ಯಾರ ಯಾರ ಹತ್ಯೆಗೆ ಸ್ಕೆಚ್ ಆಕಿದ್ರು ಅನ್ನೋದು ತನಿಖೆ ವೇಳೆ ತಿಳಿದು ಬರುತ್ತದೆ. 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments