Webdunia - Bharat's app for daily news and videos

Install App

ರಂಭಾಪುರಿ ಶ್ರೀ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪಿ ಬಂಧನ

Webdunia
ಬುಧವಾರ, 28 ನವೆಂಬರ್ 2018 (16:54 IST)
ರಂಭಾಪುರಿ ಶ್ರೀಗಳ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಪೋಸ್ಟ್ ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ.

ಅಯ್ಯನಗೌಡ ಪಾಟೀಲ ಎಂಬಾತನನ್ನು ಕಲಬುರ್ಗಿ ಪೊಲೀಸರು ಬಂಧಿಸಿದ್ದಾರೆ. ಕಲಬುರ್ಗಿಯ ಸ್ಟೇಷನ್ ಬಜಾರ್ ಠಾಣೆ ಪೊಲೀಸರು, ಅಯ್ಯನಗೌಡ ಪಾಟೀಲ್ ನನ್ನು ಬಂಧಿಸಿದ್ದಾರೆ.

ಅಯ್ಯನಗೌಡ ಪಾಟೀಲ ಜೇವರ್ಗಿ ಕಾಲೋನಿ ನಿವಾಸಿಯಾಗಿದ್ದು, ಸದ್ಯ ಕಲಬುರ್ಗಿಯ ಸಿ.ಐ.ಬಿ. ಕಾಲೋನಿಯಲ್ಲಿ ವಾಸಿಸುತ್ತಿದ್ದ. ರಂಭಾಪುರಿ ಶ್ರೀಗಳ ಬಗ್ಗೆ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದ.  ರಂಭಾಪುರಿ ಶ್ರೀಗಳನ್ನು ವೇಶ್ಯೆಗೆ ಹೋಲಿಸಿದ್ದ ಅಯ್ಯನಗೌಡ, ಗಯ್ಯಾಳಿ ಇತ್ಯಾದಿಯಾಗಿ ಅವಹೇಳನ ಮಾಡಿದ್ದ. ಅಯ್ಯನಗೌಡ ಹಾಕಿದ ಪೋಸ್ಟ್ ವಿರುದ್ಧ ರಂಭಾಪುರಿ ಶ್ರೀಗಳ ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದರು. ವೀರಶೈವ ಲಿಂಗಾಯತ ಜಂಗಮ ಬಳಗದ ಸದಸ್ಯರು, ಅಯ್ಯನಗೌಡ ಪಾಟೀಲ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ದೂರು ನೀಡಿತ್ತು.

ನವೆಂಬರ್ 22ರಂದು ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸಾಮಾಜಿಕ ಜಾಲ ತಾಣದಲ್ಲಿ ಅವಹೇಳನ ಮಾಡುವ ಮೂಲಕ ಅಯ್ಯನಗೌಡ ಪಾಟೀಲ, ರಂಭಾಪುರಿ  ಶ್ರೀಗಳ ಅನುಯಾಯಿಗಳ ಭಾವನೆಗಳಿಗೆ ಧಕ್ಕೆ ತಂದಿದ್ದರು. ಈ ಹಿನ್ನೆಲೆಯಲ್ಲಿ ಆತನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಬಂಧಿಸಲಾಗಿದೆ. ಜೊತೆಗೆ ಸಾಮಾಜಿಕ ಜಾಲ ತಾಣದಲ್ಲಿ ಹಾಕಿದ ಪೋಸ್ಟ್ ಗೆ ಲೈಕ್ ಮಾಡಿದ ಮತ್ತು ಶೇರ್ ಮಾಡಿದವರ ವಿರುದ್ಧವೂ ಕ್ರಮ ಕೈಗೊಳ್ಳುವುದಾಗಿ ಕಲಬುರ್ಗಿ ಎಸ್.ಪಿ. ಎನ್.ಶಶಿಕುಮಾರ್ ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments