ಚಿನ್ನ ಕಳ್ಳತನ ಮಾಡಿದ ಕಳ್ಳ ಎಲ್ಲಿ ಬಚ್ಚಿಡುತ್ತಿದ್ದ ಗೊತ್ತಾ?

Webdunia
ಶುಕ್ರವಾರ, 30 ನವೆಂಬರ್ 2018 (18:40 IST)
ಆತ ಬಲು ಐನಾತಿ ಕಳ್ಳ. ತಾನು ಕಳ್ಳತನ ಮಾಡಿದ ಚಿನ್ನವನ್ನು ಮೋರಿಯಲ್ಲಿ ಬಚ್ಚಿ ಇಡುತ್ತಿದ್ದ. ಹೀಗೆ ಖತರನಾಕ್ ಐಡಿಯಾ ಮಾಡಿದ್ದ ಕಳ್ಳ ಕೊನೆಗೂ ಪೊಲೀಸರ ಅತಿಥಿಯಾಗಿದ್ದಾನೆ.

 ಕಳವು ಮಾಡಿದ ಚಿನ್ನಾಭರಣಗಳನ್ನು ಮೋರಿಯಲ್ಲಿ ಬಚ್ಚಿಟ್ಟು ನಂತರ ಅವುಗಳನ್ನು ಮಾರಾಟ ಮಾಡಿ ಮೋಜು ಮಾಡುತ್ತಿದ್ದ ಮೋರಿ ಕಾಂತ ಸೇರಿ ಮೂವರನ್ನು ಆಗ್ನೇಯ ವಿಭಾಗದ ಪೊಲೀಸರು ಬಂಧಿಸಿ 1 ಕೆಜಿ 615 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಪೀಣ್ಯ 1ನೇ ಹಂತದ ಕಾಂತರಾಜ್ ಅಲಿಯಾಸ್ ಮೋರಿ ಕಾಂತ (42), ತಮಿಳುನಾಡಿನ ಗುಡಿಯಾತಂನ ಪಾಂಡಿಯನ್ (27) ಹಾಗೂ ಚೆನ್ನೈನ ಕಣ್ಣಗೈ ನಗರದ ಅಣ್ಣಾಮಲೈ (25) ಬಂಧಿತ ಆರೋಪಿಗಳಾಗಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಸುನಿಲ್ ಕುಮಾರ್ ತಿಳಿಸಿದರು.

ಕಳವು ಮಾಡಿದ ಚಿನ್ನಾಭರಣಗಳನ್ನು ದೋಚಿಕೊಂಡು ಹೋಗುವಾಗ ಬೆನ್ನಟ್ಟಿ ಬಂದ ಸ್ಥಳೀಯರಿಂದ ಮೋರಿಯಲ್ಲಿ ಬಚ್ಚಿಟ್ಟುಕೊಂಡು ತಪ್ಪಿಸಿಕೊಳ್ಳುತ್ತಿದ್ದ ಮೋರಿ ಕಾಂತ. ತನ್ನ ಮುಂದಿನ ಕಳವುಗಳಿಗೆ ಮೋರಿಯನ್ನೇ ಅವಲಂಬಿಸಿದ್ದ. ಬೀಗ ಹಾಕಿದ ಮನೆಗಳಿಗೆ ನುಗ್ಗಿ ಕಳವು ಮಾಡಿದ ಚಿನ್ನಾಭರಣಗಳನ್ನು ಬಟ್ಟೆಯಲ್ಲಿ ಕಟ್ಟಿ, ಮೋರಿಯಲ್ಲಿ ಬಚ್ಚಿಟ್ಟು, ಒಂದೆರೆಡು ದಿನಗಳ ನಂತರ ಅವುಗಳನ್ನು ತೆಗೆದುಕೊಂಡು ಮಾರಾಟ ಮಾಡಿ, ಮದ್ಯಪಾನ, ಇನ್ನಿತರ ದುಶ್ಚಟಗಳಿಗೆ ಬಳಸುತ್ತಿದ್ದ.

ಹಲವು ಕಳ್ಳತನಗಳಲ್ಲಿ ಮೋರಿಯಲ್ಲಿ ಚಿನ್ನಾಭರಣಗಳನ್ನು ಬಚ್ಚಿಟ್ಟಿದ್ದರಿಂದ ಪೊಲೀಸರಿಂದ ತಪ್ಪಿಸಿಕೊಳ್ಳುತ್ತಿದ್ದ ಆರೋಪಿಯು ಮೋರಿಯ ಮೇಲೆ ನಂಬಿಕೆ ಇಟ್ಟುಕೊಂಡು ಅದನ್ನೇ ಅನುಸರಿಸಿಕೊಂಡು ಬಂದಿದ್ದರಿಂದ ಆತನಿಗೆ ಮೋರಿ ಕಾಂತ ಎನ್ನುವ ಹೆಸರು ಬಂದಿತ್ತು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ನಿಂದ ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ವಿಜಯೇಂದ್ರ

ಬೆಳ್ತಂಗಡಿ ಸುಮಂತ್ ಕೇಸ್ ಎಲ್ಲಿಯವರೆಗೆ ಬಂತು, ಆರೋಪಿಗಳು ಸಿಕ್ಕಿಬಿದ್ದರಾ

ಗೂಂಡಾಗಿರಿ ಹೊಣೆ ಹೊತ್ತು ಮುಖ್ಯಮಂತ್ರಿ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಗವರ್ನರ್ ವಿರುದ್ಧ ಹೋರಾಟದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಕೇಂದ್ರ ಸರಕಾರದ ವಿರುದ್ಧ ದ್ವೇಷ ರಾಜಕಾರಣ ಮಾಡಲು ಸದನ ಬಳಕೆ: ವಿಜಯೇಂದ್ರ ಆಕ್ಷೇಪ

ಮುಂದಿನ ಸುದ್ದಿ
Show comments