Webdunia - Bharat's app for daily news and videos

Install App

ನಕಲಿ ಛಾಪಾ ಕಾಗದ ಮಾರುತ್ತಿದ್ದ ಆರೋಪಿಗಳನ್ನು ಬಂಧನ

Webdunia
ಭಾನುವಾರ, 21 ನವೆಂಬರ್ 2021 (21:12 IST)
ಬೆಂಗಳೂರು: ನಕಲಿ ಛಾಪಾ ಕಾಗದ ಮಾರುತ್ತಿದ್ದ ಆರೋಪಿಗಳನ್ನು ಬಂಧಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೊಸ ತಿರುವು ಸಿಕ್ಕಿದೆ. ವಿಧಾನಸೌಧದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೇ ನಕಲಿ ಛಾಪಾ ಕಾಗದ ದಂಧೆ ನಡೆಸುತ್ತಿದ್ದ ಎನ್ನುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ.
ವಿಧಾನಸೌಧದಲ್ಲಿ ಕೆಲಸ ಮಾಡುತ್ತಿದ್ದ ಬಾಬು ಎಂಬ ವ್ಯಕ್ತಿಯನ್ನು ಸದ್ಯ ಎಸ್‌ಐಟಿ  ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ವಿಧಾನಪರಿಷತ್‌ನಲ್ಲಿ ಕ್ಲೀನಿಂಗ್ ಕೆಲಸ ನಿರ್ವಹಿಸುತ್ತಿದ್ದ ಬಾಬು ಪತ್ನಿ ಸೀಮಾ ಈಗಾಗಲೇ ಬಂಧನಕ್ಕೊಳಗಾಗಿದ್ದಾಳೆ. ಸೀಮಾ ಬಂಧನದ ನಂತರ ಆರೋಪಿ ಬಾಬು ಛಾಪಾ ಕಾಗದವನ್ನು ಪಡೆದು, ವಿಧಾನಸೌಧದ ಆವರಣದಲ್ಲೇ ಮಾರುತ್ತಿದ್ದ ಎಂಬ ಸತ್ಯ ಬಯಲಾಗಿದೆ.
ಬಾಬು ಏನು ಕೆಲಸ ಮಾಡುತ್ತಾನೆಂದು ಯಾರಿಗೂ ಹೇಳುತ್ತಿರಲಿಲ್ಲ. ಸದ್ಯ ಎಸಿಪಿ ಸಕ್ರಿ ನೇತೃತ್ವದಲ್ಲಿ ರಚನೆಯಾಗಿರುವ ಎಸ್‌ಐಟಿ ತಂಡ ಬಂಧಿತರಿಂದ 63 ಲಕ್ಷ ರೂ. ಮೌಲ್ಯದ ಛಾಪಾ ಕಾಗದ ಜಪ್ತಿ ಮಾಡಿದ್ದು, ಬಾಬು ಸೇರಿ ಐವರು ಆರೋಪಿಗಳ ವಿಚಾರಣೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments