Webdunia - Bharat's app for daily news and videos

Install App

ಲಂಚ ಪಡೆಯುತ್ತಿದ್ದ ವೇಳೆ ಸಿಕ್ಕಿ ಬಿದ್ದ ಪಿಡಿಓ ಬಂಧನ

Webdunia
ಶುಕ್ರವಾರ, 21 ಜನವರಿ 2022 (21:21 IST)
ನರೇಗಾ ಯೋಜನೆಯಡಿ ಕೊಟ್ಟಿಗೆ ಬಿಲ್ ಮಾಡಿಕೊಡಲು 5 ಸಾವಿರ ರೂ. ಲಂಚ ಕೇಳಿದ್ದ ಪಿಡಿಓನ್ನು ಲಂಚಪಡೆಯುತ್ತಿರುವ ಬಂಧಿಸಿರುವ ಘಟನೆ ತಾಲೂಕಿನ ತಟ್ಟೆಕೆರೆ ಗ್ರಾಮ ಪಂಚಾಯತಿಯಲ್ಲಿ ನಡೆದಿದೆ.
ಹುಣಸೂರು ತಾಲೂಕಿನ ತಟ್ಟೆಕೆರೆ ಪಿಡಿಓ ಸತೀಶ್‌ಕುಮಾರ್ ಬಂಧಿತ ಆರೋಪಿ.
ನರೇಗಾ ಯೋಜನೆಯಡಿ ನಿಲುವಾಗಿಲು ಗ್ರಾಮದ ಸುರೇಶ್ ಎಂಬುವವರು ಸಾವಿರ ರೂ. ವೆಚ್ಚದ ದನದ ಕೊಟ್ಟಿಗೆ ನಿರ್ಮಿಸಿಕೊಳ್ಳಲು ಈಗ್ಗೆ 5-6 ತಿಂಗಳ ಹಿಂದೆ ಗ್ರಾ.ಪಂ.ಗೆ ಅರ್ಜಿ ಸಲ್ಲಿಸಿದ್ದರು, ಇತ್ತೀಚೆಗೆ ಸರಕಾರದಿಂದ ಅನುದಾನ ಬಿಡುಗಡೆಯಾಗಿತ್ತು. ಜ.18ರಂದು ಗ್ರಾ.ಪಂ.ನಲ್ಲಿ ಪಿಡಿಓರನ್ನು ಭೇಟಿಯಾದ ಪರ‍್ಯಾದುದಾರರು ಕೊಟ್ಟಿಗೆ ಬಿಲ್ ಮಾಡಿಕೊಡುವಂತೆ ಮಾಡಿದ ಮನವಿಗೆ 5 ಸಾವಿರ ರೂ ಲಂಚ ಕೇಳಿದ್ದರು. ಈ ಸಂಬಂಧ ಮೈಸೂರಿನ ಬ್ರಷ್ಟಾಚಾರ ನಿಗ್ರಹದಳಕ್ಕೆ ಪರ‍್ಯಾದುದಾರ ನಿಲುವಾಗಿಲಿನ ಸುರೇಶ್ ದೂರು ನೀಡಿದ್ದರು.
ಎ.ಸಿ.ಬಿ.ಡಿವೈ.ಎಸ್.ಪಿ.ಧರ್ಮೇಂದ್ರ ಮಾರ್ಗದರ್ಶನದಲ್ಲಿ ಗುರುವಾರ ಎಸಿಬಿ ಅಧಿಕಾರಿಗಳ ತಂಡವು ಪಿಡಿಓ ಸತೀಶ್‌ಕುಮಾರ್ 5 ಸಾವಿರ ರೂ ಲಂಚದ ಹಣ ಪಡೆಯುವಾಗಲೇ ಕಾರ್ಯಾಚರಣೆ ನಡೆಸಿ, ಲಂಚ ಪಡೆಯುತ್ತಿವ ವೇಳೆ ಹಣವನ್ನು ವಶಕ್ಕೆ ಪಡೆದು ಬಂಧಿಸಿದ್ದಾರೆ. ಗ್ರಾ.ಪಂ.ನಲ್ಲಿ ತಡ ರಾತ್ರಿವರೆಗೂ ಎ.ಸಿ.ಬಿ. ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ.
ಕಾರ್ಯಾಚರಣೆಯಲ್ಲಿ ಇನ್ಸ್ಪೆಕ್ಟರ್‌ಗಳಾದ ಮೋಹನ್ ಕೃಷ್ಣ, ಚಿತ್ತರಂಜನ್, ಸಿಬ್ಬಂದಿಗಳಾದ ಪುಷ್ಪಲತಾ, ಗುರುಪ್ರಸಾದ್, ಪಾಪಣ್ಣ, ನಾಗೇಶ್, ಮಂಜುನಾಥ್, ಯೋಗೀಶ್, ಚೇತನ್ ಭಾಗಿಯಾಗಿದ್ದರೆಂದು ಡಿವೈಎಸ್‌ಪಿ ಧರ್ಮೇಂದ್ರ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫ್ರೀಡಂ ಪಾರ್ಕ್‌ನ ಕಾಂಪೌಂಡ್ ನೆಲಸಮದಿಂದ ಪರಿಸರಕ್ಕೆ ಹಾನಿ: ಬಿಜೆಪಿ ದೂರು

ಮುಂಬೈ– ಪುಣೆ ಪ್ರಯಾಣಿಕರ ಜತೆ ಗುಡ್‌ನ್ಯೂಸ್ ಹಂಚಿಕೊಂಡ ನಿತಿನ್ ಗಡ್ಕರಿ

ಉತ್ತರಕಾಶಿ ಮೇಘಸ್ಫೋಟ: ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ–ಕಾಲೇಜಿಗೆ ರಜೆ ಘೋಷಣೆ

ಧರ್ಮಸ್ಥಳ, ಎಲ್ಲರ ಚಿತ್ತ ನಾಳೆಯ ಕೊನೆಯ ಪಾಯಿಂಟ್‌ನತ್ತ, ಇಂದಿನ ಶೋಧದಲ್ಲಿ ಬಿಗ್‌ಟ್ವಿಸ್ಟ್‌

ಉತ್ತರಕಾಶಿಯ ರಣಭೀಕರ ಮೇಘಸ್ಫೋಟ: ಮಿಡಿದ ಮೋದಿಯಿಂದ, ರಕ್ಷಣಾ ನೆರವು ಘೋಷಣೆ

ಮುಂದಿನ ಸುದ್ದಿ
Show comments