Webdunia - Bharat's app for daily news and videos

Install App

ಜಿಲ್ಲಾ ಮಟ್ಟದಲ್ಲಿಯೇ ಜಮೆಯಾಗಲಿದೆ ಕಲಾವಿದರ ಸಂಭಾವನೆ: ಉಮಾಶ್ರೀ

Webdunia
ಭಾನುವಾರ, 26 ಜುಲೈ 2015 (11:12 IST)
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಡೆಸುವ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಕಲಾವಿದರಿಗೆ ನೀಡಲಾಗುವ ಸಂಭಾವನೆಯನ್ನು ಇನ್ನು ಮುಂದೆ ಜಿಲ್ಲಾ ಮಟ್ಟದಲ್ಲೇ ಪರಿಶೀಲಿಸಿ ನೇರವಾಗಿ ಅವರ ಖಾತೆಗೇ ಜಮಾ ಮಾಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಉಮಾಶ್ರೀ ತಿಳಿಸಿದ್ದಾರೆ. 
 
ನಗರದ ಪಿಲಿಕುಳದಲ್ಲಿ ಎರಡು ದಿನಗಳ ರಾಜ್ಯ ಸಮ್ಮೇಳನ `ಸಂಗಮ ಸಂಭ್ರಮ'ಕ್ಕೆ ಕನ್ನಡದ ಬಾವುಟ ಹಾರಿಸುವ ಮೂಲಕ ಚಾಲನೆ ನೀಡಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಡೆಸುವ ಕಾರ್ಯಕ್ರಮಗಳಲ್ಲಿ ಕಲಾವಿದರ ಸಂಭಾವನೆಯನ್ನು ಇದುವರೆಗೆ ಬೆಂಗಳೂರಿನಲ್ಲಿ ಪರಿಶೀಲಿಸಿ ಆಧ ಬಳಿಕ ಅವರ ಖಾತೆಗೆ ಜಮೆ ಮಾಡಲಾಗುತ್ತಿತ್ತು. ಆದರೆ ಪ್ರಸ್ತುತ ಇದನ್ನು ಸರಳಗೊಳಿಸಲಾಗುತ್ತಿದ್ದು, ಜಿಲ್ಲಾ ಮಟ್ಟದಲ್ಲಿಯೇ ಪರಿಶೀಲಿಸಿ ಜಿಲ್ಲೆಯಿಂದಲೇ ನೇರವಾಗಿ ಖಾತೆಗೆ ರವಾನೆಯಾಗಲಿದೆ
ಎಂದು ತಿಳಿಸಿದರು.
 
ಕಾರ್ಯಕ್ರಮದಲ್ಲಿ ಶಾಸಕ ಜೆ.ಆರ್.ಲೋಬೋ, ಜಿ.ಪಂ. ಅಧ್ಯಕ್ಷೆ ಆಶಾ ತಿಮ್ಮಪ್ಪ ಗೌಡ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಿವೇದಿತ್ ಆಳ್ವಾ, ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments