ಮಾತು ಮರೆತಿದ್ದೀರಿ: ಬಿಜೆಪಿ ನಾಯಕರಿಗೆ ಬಹಿರಂಗ ಎಚ್ಚರಿಕೆ ಕೊಟ್ಟ ಅರುಣ್ ಕುಮಾರ್ ಪುತ್ತಿಲ

Krishnaveni K
ಗುರುವಾರ, 11 ಸೆಪ್ಟಂಬರ್ 2025 (16:29 IST)
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಅರುಣ್ ಕುಮಾರ್ ಪುತ್ತಿಲ ಬಿಜೆಪಿಗೆ ಮುಳ್ಳಾಗುವ ಸೂಚನೆಯಿದೆ. ಅಂದು ಕೊಟ್ಟ ಮಾತು ಮರೆತಿದ್ದೀರಿ ಎಂದು ಪುತ್ತಿಲ ಬಹಿರಂಗವಾಗಿಯೇ ಬಿಜೆಪಿ ನಾಯಕರಿಗೆ ಎಚ್ಚರಿಕೆ ಕೊಟ್ಟಿದ್ದಾರೆ.

ಈ ಹಿಂದೆ ವಿಧಾನಸಭೆ ಚುನಾವಣೆ ವೇಳೆ ಅರುಣ್ ಕುಮಾರ್ ಪುತ್ತಿಲಗೆ ಜನ ಬೆಂಬಲವಿದ್ದರೂ ಟಿಕೆಟ್ ಕೊಡದೇ ಬಿಜೆಪಿ ನಾಯಕರು ಕೈ ಸುಟ್ಟುಕೊಂಡಿದ್ದರು. ಮತ್ತೆ ಲೋಕಸಭೆ ಚುನಾವಣೆ ವೇಳೆ ಮತ್ತೊಮ್ಮೆ ಅರುಣ್ ಕುಮಾರ್ ಪುತ್ತಿಲ ಪಕ್ಷೇತರ ಅಭ್ಯರ್ಥಿಯಾಗಿ ನಿಲ್ಲಲು ಹೊರಟಾಗ ಬಿಜೆಪಿ ಅವರ ಮನವೊಲಿಸಿ ಸುಮ್ಮನಾಗಿಸಿತ್ತು.

ಪುತ್ತಿಲ ಪರಿವಾರ ಕೊನೆಗೆ ಬಿಜೆಪಿ ಜೊತೆ ವಿಲೀನವಾಗಿತ್ತು. ಆದರೆ ಅಗ ಪುತ್ತಿಲ ಕೆಲವೊಂದು ಷರತ್ತುಗಳನ್ನು ವಿಧಿಸಿದ್ದರು. ಆದರೆ ಅದು ಇದುವರೆಗೆ ಈಡೇರಿಲ್ಲ ಎನ್ನುವುದು ಅವರ ಆಕ್ರೋಶಕ್ಕೆ ಕಾರಣವಾಗಿದೆ.

ಹೀಗಾಗಿ ತಮ್ಮ ಬೆಂಬಲಿಗರೊಡನೆ ಸಭೆ ನಡೆಸಿದ ಬಳಿಕ ಬಹಿರಂಗ ಎಚ್ಚರಿಕೆ ನೀಡಿರುವ ಅವರು ‘ನಾಯಕರು ಎಚ್ಚೆತ್ತುಕೊಂಡರೆ ಒಳಿತು. ಇಲ್ಲದಿದ್ದರೆ ಮುಂದೆ ಡ್ಯಾಮೇಜ್ ಕಂಟ್ರೋಲ್ ಮಾಡಲು ಪರದಾಡಬೇಕಾದ ಪರಿಸ್ಥಿತಿ ಬರಬಹುದು. ಮತ್ತೆ ಮೊದ್ಲಿನ ರೀತಿಯೇ ಅವ ಅರುಣ ಯಾರು ಅವನೊಂದಿಗಿರುವವರು ನಾಲ್ಕು ಜನ ವೋಟ್ ಹಾಕ್ಯಾರು ಎಂದು ಕಳೆದ ಚುನಾವಣೆಯ ಪ್ರಚಾರದ ಸಂದರ್ಭದಲ್ಲಿ ಹೇಳಿಕೊಂಡು ಹೋಗಿ ನಾಚಿಗೆ ಕೆ್ಟ ಹಾಗೆ ಆಗಬಹುದು’ ಎಂದು ಎಚ್ಚರಿಕೆ ನೀಡಿದ್ದಾರೆ. ಇದೀಗ ಅರುಣ್ ಕುಮಾರ್ ಪುತ್ತಿಲ ಪರಿವಾರಕ್ಕೆ ಬಿಜೆಪಿ ಸೂಕ್ತ ಸ್ಥಾನ ಮಾನ ನೀಡುತ್ತಾ ಕಾದು ನೋಡಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೈಕಮಾಂಡ್‌ನಲ್ಲಿ ಕೆಲ ಶಾಸಕರ ಶಕ್ತಿಪ್ರದರ್ಶನ, ಕೊನೆಗೂ ಮೌನ ಮುರಿದ ಡಿಕೆ ಶಿವಕುಮಾರ್

ಶಕ್ತಿ ಪ್ರದರ್ಶನಕ್ಕೆ ಜೈಲಿಗೂ ಕಾಲಿಟ್ರಾ ಡಿಕೆ ಶಿವಕುಮಾರ್, ಭಾರೀ ಬೆಳವಣಿಗೆ

ಕಾಂಗ್ರೆಸ್ ಸರಕಾರ ಹೋಳು; ಜನರ ಪಾಲಿಗೆ ಗೋಳು, ರೈತರಿಗೆ ಹೂಳು: ಆರ್.ಅಶೋಕ್ ಟೀಕೆ

ಸಹೋದ್ಯೋಗಿಯೊಂದಿಗಿನ ಆಫೇರ್‌ನಿಂದ 150 ಕೋಟಿ ಸಂಬಳದ ಕೆಲಸ ಕಳೆದುಕೊಂಡ ವ್ಯಕ್ತಿ

ಡಿಕೆಶಿ ಶಕ್ತಿಪ್ರದರ್ಶನದ ಬೆನ್ನಲ್ಲೇ ನನ್ನದು ಕಾಂಗ್ರೆಸ್ ಬಣ ಎಂದ ರಾಮಲಿಂಗಾ ರೆಡ್ಡಿ

ಮುಂದಿನ ಸುದ್ದಿ
Show comments