Webdunia - Bharat's app for daily news and videos

Install App

Arunachal Pradesh: ಪ್ರವಾಹದ ನಡುವೆ ತೂಗಾಡುತ್ತಿರುವ ಸೇತುವೆ ದಾಟುತ್ತಿರುವ ಯುವಕನ ಮೈ ಝುಂ ಎನಿಸುವ ವಿಡಿಯೋ

Krishnaveni K
ಸೋಮವಾರ, 2 ಜೂನ್ 2025 (14:33 IST)
Photo Credit: X
ಅರುಣಾಚಲ ಪ್ರದೇಶ: ಈ ಬಾರಿ ಮುಂಗಾರು ಮಳೆ ದೇಶದಾದ್ಯಂತ ಅಬ್ಬರಿಸುತ್ತಿದೆ. ಅರುಣಾಚಲ ಪ್ರದೇಶದಲ್ಲೂ ಭಾರೀ ಮಳೆಯಾಗಿದ್ದು, ಪ್ರವಾಹದ ನಡುವೆ ತೂಗಾಡುತ್ತಿರುವ ಸೇತುವೆಯಲ್ಲಿ ಹಗ್ಗ ಹಿಡಿದು ಯುವಕನೊಬ್ಬ ನದಿ ದಾಟುತ್ತಿರುವ ಮೈ ಝುಂ ಎನಿಸುವ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಅರುಣಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹದ ಪರಿಸ್ಥಿತಿಯಿದೆ. ಈ ನಡುವೆ ಜನ ಸುರಕ್ಷಿತ ಸ್ಥಳಗಳಿಗೆ ತೆರಳಿ ತಮ್ಮ ಜೀವ ಉಳಿಸಿಕೊಳ್ಳಲು ಪರದಾಡುತ್ತಿದ್ದಾರೆ. ಇದೇ ರೀತಿ ಯುವಕನೊಬ್ಬ ಪ್ರಾಣದ ಹಂಗು ತೊರೆದು ನದಿ ದಾಟುವ ದೃಶ್ಯ ವೈರಲ್ ಆಗಿದೆ.

ಅರುಣಾಚಲ ಪ್ರದೇಶದ ಅಂಜಾವ್ ಜಿಲ್ಲೆಯ ಭಾರತ-ಚೀನಾ ಗಡಿ ಭಾಗದಲ್ಲಿ ಘಟನೆ ಸಂಭವಿಸಿದೆ. ಭಾರೀ ರಭಸದಿಂದ ನದಿ ದುಮ್ಮಿಕ್ಕಿ ಹರಿಯುತ್ತಿದ್ದು ಅದರ ಮೇಲೆ ತೂಗು ಸೇತುವೆಯೊಂದಿದೆ. ಪ್ರವಾಹದ ರಭಸಕ್ಕೆ ಸೇತುವೆಯೇ ಅಲುಗಾಡುತ್ತಿದೆ.

ಹಾಗಿದ್ದರೂ ಯುವಕ ಮೇಲೆ ಒಂದು ಹಗ್ಗ ಹಿಡಿದುಕೊಂಡು ತೇಲಾಡುತ್ತಿರುವ ಸೇತುವೆಯಲ್ಲಿ ಹರಸಾಹಸ ಮಾಡಿ ಅತ್ತ ದಾಟುತ್ತಿದ್ದಾನೆ. ಈ ವಿಡಿಯೋ ನೋಡಿದರೆ ಮೈ ಝುಂ ಎನಿಸುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಸಾಲು ಪ್ರತಿಭಟನೆ ಬೆನ್ನಲ್ಲೇ ದೊಡ್ಡ ಮಟ್ಟದ ಸಭೆ ನಡೆಸಿದ ಮಲ್ಲಿಕಾರ್ಜುನ ಖರ್ಗೆ

ಆರ್ಯಭಟ್ಟರು ಸೊನ್ನೆಯಿಂದ ಇತಿಹಾಸ ನಿರ್ಮಿಸಿದರು: ಪ್ರಧಾನಿ ಮೋದಿ

ಲಕ್ಷ್ಮೀ ಹೆಬ್ಬಾಳಕರ, ರಾಜ್ಯಪಾಲರ ಸಹಿ ನಕಲು ಮಾಡಿ ಲಕ್ಷಾಂತರ ವಂಚನೆ: ಬಿಗ್ ಅಪ್ಡೇಟ್ ನೀಡಿದ ಎಸ್‌ಪಿ

ಲಾಲ್‌ ಬಾಗ್‌, ಕಬ್ಬನ್ ಪಾರ್ಕ್‌ನಂತಹ ಇನ್ನಷ್ಟು ಉದ್ಯಾನವನಗಳ ಅಗತ್ಯವಿದೆ: ಈಶ್ವರ್ ಖಂಡ್ರೆ

ವಿಧಾನಸಭೆಯಲ್ಲೂ ಪ್ರತಿಧ್ವನಿಸಿದ ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ: ವರದಿ ಬಿಡುಗಡೆಗೆ ಬಿಜೆಪಿ ಆಗ್ರಹ

ಮುಂದಿನ ಸುದ್ದಿ
Show comments