Webdunia - Bharat's app for daily news and videos

Install App

ಕೊನೆಗೂ ಸಿಎಂ ನಿವಾಸ ಖಾಲಿ ಮಾಡಿದ ಅರವಿಂದ್ ಕೇಜ್ರಿವಾಲ್: ನೌಕರರನ್ನು ಅಪ್ಪಿ ಬೀಳ್ಕೊಟ್ಟ ಮಾಜಿ ಸಿಎಂ

Krishnaveni K
ಶುಕ್ರವಾರ, 4 ಅಕ್ಟೋಬರ್ 2024 (15:19 IST)
Photo Credit: X
ನವದೆಹಲಿ: ದೆಹಲಿಯ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಇಂದು ಸಿಎಂ ಅಧಿಕೃತ ನಿವಾಸ ಖಾಲಿ ಮಾಡಿದ್ದು ಹೊಸ ಮನೆಗೆ ಶಿಫ್ಟ್ ಆಗಿದ್ದಾರೆ. ಇದಕ್ಕೆ ಮೊದಲು ಅವರು ಮನೆಯ ನೌಕರರನ್ನು ಬಿಗಿದಪ್ಪಿ ಬೀಳ್ಕೊಡುಗೆ ಪಡೆದಿದ್ದಾರೆ.

ತಮ್ಮ ವಯಸ್ಸಾದ ತಂದೆ-ತಾಯಿ ಹಾಗೂ ಪತ್ನಿ ಜೊತೆಗೆ ಕೇಜ್ರಿವಾಲ್ ಸಿಎಂ ಅಧಿಕೃತ ನಿವಾಸದಿಂದ ಹೊರಗೆ ಬರುವ ದೃಶ್ಯಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ದೆಹಲಿ ಅಬಕಾರಿ ಅಕ್ರಮ ಹಗರಣ ಸಂಬಂಧ ಜಾಮೀನು ಪಡೆದು ಹೊರಬಂದ ಬೆನ್ನಲ್ಲೇ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಆದರೆ ಇದುವರೆಗೆ ಸಿಎಂ ಅಧಿಕೃತ ನಿವಾಸದಲ್ಲಿಯೇ ಇದ್ದರು. ಇಂದು ಅಧಿಕೃತ ನಿವಾಸದಿಂದ ಆಪ್ ಮುಖ್ಯ ಕಚೇರಿಯ ಸಮೀಪವಿರುವ ಹೊಸ ಮನೆಗೆ ಶಿಫ್ಟ್ ಆಗಿದ್ದಾರೆ. ಈ ವೇಳೆ ಇಷ್ಟು ದಿನ ಅವರ ಜೊತೆ ಕೆಲಸ ಮಾಡುತ್ತಿದ್ದ ಎಲ್ಲಾ ನೌಕರರೂ ಸಾಲಾಗಿ ನಿಂತು ಕೇಜ್ರಿವಾಲ್ ರನ್ನು ಬೀಳ್ಕೊಟ್ಟರು. ಪ್ರತಿಯೊಬ್ಬರನ್ನೂ ಬಿಗಿದಪ್ಪಿ ಕೇಜ್ರಿವಾಲ್ ಇಷ್ಟು ದಿನ ತಮಗೆ ಸೇವೆ ಸಲ್ಲಿಸಿದ್ದಕ್ಕೆ ಧನ್ಯವಾದ ಸಲ್ಲಿಸಿದರು.

ಕೇಜ್ರಿವಾಲ್ ಬಳಿಕ ದೆಹಲಿ ಸಿಎಂ ಆಗಿ ಅವರ ಅತ್ಯಾಪ್ತರಾಗಿದ್ದ ಸಚಿವೆ ಅತಿಶಿ ಅಧಿಕಾರ ಸ್ವೀಕರಿಸಿದ್ದಾರೆ. ಆದರೆ ಕೇಜ್ರಿವಾಲ್ ಮೇಲಿನ ಗೌರವದಿಂದಾಗಿ ಅವರು ಕೂರುತ್ತಿದ್ದ ಸಿಎಂ ಕುರ್ಚಿಯಲ್ಲಿ ಕೂರದೇ ಅವರ ನಿವಾಸವನ್ನೂ ಬಳಸುತ್ತಿಲ್ಲ ಎನ್ನಲಾಗಿದೆ. ನಾನು ಭರತನ ರೀತಿ ದೆಹಲಿ ಆಡಳಿತ ನಡೆಸುತ್ತೇನೆ ಎಂದು ಅತಿಶಿ ಹೇಳಿದ್ದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments