ಅರವಿಂದ್ ಕೇಜ್ರಿವಾಲ್‌ ಜಾರಿಗೆ ತಂದಿರುವ ಜನಪರ ಯೋಜನೆಗಳು ರಾಜ್ಯದಲ್ಲೂ ಜಾರಿಗೆ ..?

Webdunia
ಗುರುವಾರ, 9 ಡಿಸೆಂಬರ್ 2021 (19:34 IST)
admmy
ಬೆಂಗಳೂರು: ಆಮ್ ಆದ್ಮಿ ಪಕ್ಷದ ಕೇಂದ್ರದ ರಾಜ್ಯ ಉಸ್ತುವಾರಿ ರೋಮಿ ಭಾಟಿಯವರಿಗೆ ಆಶೀರ್ವಾದ ಮಾಡಿದ ನಿರ್ಮಲಾನಂದ ಸ್ವಾಮೀಜಿ ದೆಹಲಿಯ ಅರವಿಂದ್ ಕೇಜ್ರಿವಾಲ್‌ ಆಡಳಿತದ ಬಗ್ಗೆ ಸಾಕಷ್ಟು ಕೇಳಿರುವೆ. ದೆಹಲಿಯಲ್ಲಿ ಜಾರಿಗೆ ತಂದಿರುವ ಜನಪರ ಯೋಜನೆಗಳು ನಮ್ಮಲ್ಲೂ ಜಾರಿಗೆ ಬರಲಿ. ಆಮ್‌ ಆದ್ಮಿ ಪಾರ್ಟಿಗೆ ಒಳಿತಾಗಲಿ. ರಾಜಕೀಯದಿಂದ ಭ್ರಷ್ಟಾಚಾರವನ್ನು ದೂರವಿಡುವ ನಿಮ್ಮ ಉದ್ದೇಶ ಶೀಘ್ರವೇ ಈಡೇರಲಿ ಎಂದು ಹೇಳಿದರು.
 
ಬೆಂಗಳೂರಿನ ವಿಜಯನಗರದಲ್ಲಿರುವ ಮಠದಲ್ಲಿ ಗುರುವಾರ ಸ್ವಾಮೀಜಿಯವರನ್ನು ಭೇಟಿಯಾದ ರೋಮಿ ಭಾಟಿ ಆಮ್‌ ಆದ್ಮಿ ಪಾರ್ಟಿಯ ತತ್ತ್ವ ಸಿದ್ಧಾಂತಗಳನ್ನು ವಿವರಿಸಿದರು. ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ರವರ ಸರ್ಕಾರವು ಶಿಕ್ಷಣ, ಆರೋಗ್ಯ, ಸಾರಿಗೆ, ಸುರಕ್ಷತೆ ಹಾಗೂ ಮೂಲ ಸೌಕರ್ಯಗಳಿಗೆ ಸಂಬಂಧಿಸಿ ಕ್ರಾಂತಿಕಾರಿ ಬದಲಾವಣೆ ತಂದಿರುವುದನ್ನು ಸ್ವಾಮೀಜಿಯವರಿಗೆ ಮನವರಿಕೆ ಮಾಡಿಕೊಟ್ಟರು. ಕರ್ನಾಟಕದಲ್ಲಿ ಗುತ್ತಿಗೆ ಕಾಮಗಾರಿಗಳಲ್ಲಿ ಶೇ 40 ರಷ್ಟು ಭ್ರಷ್ಟಾಚಾರ ನಡೆಯುತ್ತಿರುವುದರ ವಿರುದ್ಧ ಹೋರಾಡಲು ಆಮ್‌ ಆದ್ಮಿ ಪಾರ್ಟಿ ನಿರ್ಧರಿಸಿದ್ದು, ಈ ಸದುದ್ದೇಶದ ಹೋರಾಟದಲ್ಲಿ ಯಶಸ್ಸು ಸಿಗುವಂತೆ ಆಶೀರ್ವಾದ ಮಾಡಬೇಕೆಂದು ರೋಮಿ ಭಾಟಿ ಮನವಿ ಮಾಡಿದರು.
 
ಒಕ್ಕಲಿಗರ ಸಂಘದ ಚುನಾವಣೆಯ ಅಭ್ಯರ್ಥಿ ಚನ್ನಪ್ಪಗೌಡ ನೆಲ್ಲೂರು, ಎಎಪಿ ಮುಖಂಡರಾದ ನಂಜಪ್ಪ ಕಾಳೇಗೌಡ, ಲಕ್ಷ್ಮೀಕಾಂತ ರಾವ್‌, ಡಾ. ಸತೀಶ್‌ ಕುಮಾರ್‌, ಕುಶಲ ಸ್ವಾಮಿ, ಸುಹಾಸಿನಿ, ಡಾ. ರಮೇಶ್‌, ಜಗದೀಶ್‌ ಚಂದ್ರ ಜೊತೆಗಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಿಭಟಿಸುತ್ತಿರುವ ವಿದ್ಯಾರ್ಥಿಗಳ ಬಗ್ಗೆ‌ ಕ್ರಿಕೆಟ್ ದೇವರು ಸಚಿನ್ ಮಹತ್ವದ ಪೋಸ್ಟ್‌

ಧರ್ಮೇಂದ್ರ ಪ್ರಧಾನ್‌ರನ್ನು ಕೆಳಗಿಳಿಸದಿದ್ದರೆ, ಮುಂದೆ ಪ್ರಧಾನಿ ರಾಜೀನಾಮೆಯೆ ನಮ್ಮ ಡಿಮ್ಯಾಂಡ್ ಆಗಿರುತ್ತೆ: ಅಭಿಜೀತ್

ಮದುವೆಯಾದವರು ಹನಿಮೂನ್‍ಗೆ ಒಂದು ಬಾರಿ ವಿದೇಶಕ್ಕೆ ತೆರಳಿದರೆ ರಾಹುಲ್ ಗಾಂಧಿ ಪದೇಪದೇ ಹೊರದೇಶಕ್ಕೆ ಹೋಗುತ್ತಾರೆ

ಕೊತ್ವಾಲ್ ರಾಮಚಂದ್ರ ಅವರ ಶಿಷ್ಯ ಏಡ್ಸ್ ಇಂಜೆಕ್ಷನ್ ತಲಗುಲಿಸಿದ ಮೇಲೆ ಅಶೋಕ್ ಗೆ ಬುದ್ಧಿ ಭ್ರಮಣೆಯಾಗಿದೆ: ಬಿಕೆ ಹರಿಪ್ರಸಾದ್

ರಾತ್ರಿ ಪೂರ್ತಿ ಅನಿಲ ಸೋರಿಕೆ, ಬೆಳಗೆದ್ದು ಲೈಟ್ ಆನ್ ಮಾಡುತ್ತಿದ್ದ ಹಾಗೇ ಆವರಿಸಿದ ಬೆಂಕಿ, ಮುಂದೆ ಆಗಿದ್ದು ಭಾರೀ ಅವಘಡ

ಮುಂದಿನ ಸುದ್ದಿ
Show comments