Webdunia - Bharat's app for daily news and videos

Install App

ರಾಜ್ಯದಲ್ಲಿ ಹೆಚ್ಚಿದ ಕೋಮು ಸಂಘರ್ಷ: ಹೂಡಿಕೆದಾರರು ತಮಿಳುನಾಡಿಗೆ ವಲಸೆ?

Webdunia
ಸೋಮವಾರ, 11 ಏಪ್ರಿಲ್ 2022 (15:18 IST)
ದಿನಕ್ಕೊಂದು ಕೋಮು ಸಂಘರ್ಷ ನಡೆಯುತ್ತಿರುವ ಹಿನ್ನೆಲೆಯಲ್ಲಿ ಬಂಡವಾಳ ಹೂಡಿಕೆದಾರರು ಕರ್ನಾಟಕದಿಂದ ಕಾಲ್ಕೀಳಲು ಆರಂಭಿಸಿದ್ದು, ನೆರೆಯ ತಮಿಳುನಾಡಿಗೆ ವಲಸೆ ಹೋಗುತ್ತಿದ್ದಾರೆ.
ಇತ್ತೀಚೆಗಷ್ಟೇ ತೆಲಂಗಾಣದ ಸಚಿವರೊಬ್ಬರು ಕರ್ನಾಟಕದಿಂದ ಗಂಟುಮೂಟೆ ಕಟ್ಟಿ ಹೈದರಾಬಾದ್‌ ಗೆ ಬನ್ನಿ ಎಂದು ಕರೆ ನೀಡಿದ್ದರು. ಇದರ ಬೆನ್ನಲ್ಲೇ ಕರ್ನಾಟಕದಲ್ಲಿ ಹಿಂದೂ ಸಂಘಟನೆಗಳು ಮುಸ್ಲಿಮರ ವಿರುದ್ಧ ದಿನಕ್ಕೊಂದು ವಿಷಯಗಳ ಮೇಲೆ ಅಭಿಯಾನ ಆರಂಭಿಸುತ್ತಿದ್ದಾರೆ.
ಹಿಜಾಬ್‌ ವಿವಾದ ಕಾಣಿಸಿಕೊಂಡ ನಂತರ ಕಳೆದ ಮೂರು ವಾರಗಳಿಂದ ರಾಜ್ಯದಲ್ಲಿ ಒಂದಲ್ಲ ಒಂದು ವಿಷಯದಲ್ಲಿ ಧಾರ್ಮಿಕ ಸಂಘರ್ಷ ನಡೆಯುತ್ತಿದೆ. ಇದೇ ವೇಳೆ ಕರ್ನಾಟಕ ಜಾಗತಿಕ ಮಟ್ಟದಲ್ಲಿ ಬಂಡವಾಳ ಹೂಡಿಕೆದಾರರನ್ನು ಆಕರ್ಷಿಸಲು ಸಮಾವೇಶಗಳನ್ನು ಹಮ್ಮಿಕೊಳ್ಳಲು ಸಿದ್ಧತೆ ನಡೆಸಿದೆ.
ಇದೇ ವೇಳೆ ತಮಿಳುನಾಡು ಹಣಕಾಸು ಸಚಿವ ಪಳನಿವೆಲ್‌ ತಿಂಗರಾಜನ್‌, ಐಟಿ ಕಂಪನಿಗಳು ತಮಿಳುನಾಡಿನತ್ತ ಹೆಚ್ಚು ಆಸಕ್ತಿ ತೋರಿಸುತ್ತಿದ್ದಾರೆ. ನೆರೆಯ ರಾಜ್ಯದಲ್ಲಿರುವ ಕಂಪನಿಗಳು ನಮ್ಮ ರಾಜ್ಯಗಳಲ್ಲಿ ಬಂಡವಾಳ ಹೂಡಲು ಆಸಕ್ತಿ ವಹಿಸುತ್ತಿವೆ ಎಂದು ಹೇಳಿದರು. ಆದರೆ ಯಾವ ರಾಜ್ಯದಿಂದ ಎಂದು ನಿರ್ದಿಷ್ಟವಾಗಿ ಉಲ್ಲೇಖ ಮಾಡಲು ನಿರಾಕರಿಸಿದರು.
ಕರ್ನಾಟಕದಲ್ಲಿ ಅದರಲ್ಲೂ ಬೆಂಗಳೂರಿನಲ್ಲಿರುವ ಐಟಿ ಕಂಪನಿಗಳು ತಮಿಳುನಾಡಿಗೆ ವಲಸೆ ಹೋಗುತ್ತಿವೆ ಎಂದು ಹೇಳಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಾಧಿಕಾರಿ ಏನು ದಾವುದ್ ಇಬ್ರಾಹಿಂ ನಾ, ಇದೆಲ್ಲ ವ್ಯವಸ್ಥಿತ ಸಂಚು: ಪ್ರತಾಪ್ ಸಿಂಹ ಆಕ್ರೋಶ

ರಾಹುಲ್ ಗಾಂಧಿ ಅಜ್ಜಿಯೇ ಮತಗಳ್ಳತನದಿಂದ ಗೆದ್ದಿದ್ದರು: ಆರಗ ಜ್ಞಾನೇಂದ್ರ

ರಾಹುಲ್ ಗಾಂಧಿ ಅವರ ದಿಟ್ಟ ಹೋರಾಟಕ್ಕೆ ಸಂಪೂರ್ಣ ಬೆಂಬಲ: ಡಿಸಿಎಂ ಡಿ.ಕೆ. ಶಿವಕುಮಾರ್

ಮತಗಳ್ಳತನ, ನರೇಂದ್ರ ಮೋದಿಗೆ ಪ್ರಧಾನಿ ಕುರ್ಚಿಯಲ್ಲಿ ಕೂರುವ ನೈತಿಕತೆಯಿಲ್ಲ: ಸಿದ್ದರಾಮಯ್ಯ

ಅನೇಕ ಕ್ಷೇತ್ರಗಳಲ್ಲಿ ಮತಗಳ್ಳತನ: ಪ್ರಧಾನಿ, ಚುನಾವಣಾ ಆಯೋಗದ ವಿರುದ್ಧ ಬೆಂಗಳೂರಿನಲ್ಲಿ ಗುಡುಗಿದ ರಾಹುಲ್‌

ಮುಂದಿನ ಸುದ್ದಿ
Show comments