ರಾಜ್ಯದಲ್ಲಿ ಹೆಚ್ಚಿದ ಕೋಮು ಸಂಘರ್ಷ: ಹೂಡಿಕೆದಾರರು ತಮಿಳುನಾಡಿಗೆ ವಲಸೆ?

Webdunia
ಸೋಮವಾರ, 11 ಏಪ್ರಿಲ್ 2022 (15:18 IST)
ದಿನಕ್ಕೊಂದು ಕೋಮು ಸಂಘರ್ಷ ನಡೆಯುತ್ತಿರುವ ಹಿನ್ನೆಲೆಯಲ್ಲಿ ಬಂಡವಾಳ ಹೂಡಿಕೆದಾರರು ಕರ್ನಾಟಕದಿಂದ ಕಾಲ್ಕೀಳಲು ಆರಂಭಿಸಿದ್ದು, ನೆರೆಯ ತಮಿಳುನಾಡಿಗೆ ವಲಸೆ ಹೋಗುತ್ತಿದ್ದಾರೆ.
ಇತ್ತೀಚೆಗಷ್ಟೇ ತೆಲಂಗಾಣದ ಸಚಿವರೊಬ್ಬರು ಕರ್ನಾಟಕದಿಂದ ಗಂಟುಮೂಟೆ ಕಟ್ಟಿ ಹೈದರಾಬಾದ್‌ ಗೆ ಬನ್ನಿ ಎಂದು ಕರೆ ನೀಡಿದ್ದರು. ಇದರ ಬೆನ್ನಲ್ಲೇ ಕರ್ನಾಟಕದಲ್ಲಿ ಹಿಂದೂ ಸಂಘಟನೆಗಳು ಮುಸ್ಲಿಮರ ವಿರುದ್ಧ ದಿನಕ್ಕೊಂದು ವಿಷಯಗಳ ಮೇಲೆ ಅಭಿಯಾನ ಆರಂಭಿಸುತ್ತಿದ್ದಾರೆ.
ಹಿಜಾಬ್‌ ವಿವಾದ ಕಾಣಿಸಿಕೊಂಡ ನಂತರ ಕಳೆದ ಮೂರು ವಾರಗಳಿಂದ ರಾಜ್ಯದಲ್ಲಿ ಒಂದಲ್ಲ ಒಂದು ವಿಷಯದಲ್ಲಿ ಧಾರ್ಮಿಕ ಸಂಘರ್ಷ ನಡೆಯುತ್ತಿದೆ. ಇದೇ ವೇಳೆ ಕರ್ನಾಟಕ ಜಾಗತಿಕ ಮಟ್ಟದಲ್ಲಿ ಬಂಡವಾಳ ಹೂಡಿಕೆದಾರರನ್ನು ಆಕರ್ಷಿಸಲು ಸಮಾವೇಶಗಳನ್ನು ಹಮ್ಮಿಕೊಳ್ಳಲು ಸಿದ್ಧತೆ ನಡೆಸಿದೆ.
ಇದೇ ವೇಳೆ ತಮಿಳುನಾಡು ಹಣಕಾಸು ಸಚಿವ ಪಳನಿವೆಲ್‌ ತಿಂಗರಾಜನ್‌, ಐಟಿ ಕಂಪನಿಗಳು ತಮಿಳುನಾಡಿನತ್ತ ಹೆಚ್ಚು ಆಸಕ್ತಿ ತೋರಿಸುತ್ತಿದ್ದಾರೆ. ನೆರೆಯ ರಾಜ್ಯದಲ್ಲಿರುವ ಕಂಪನಿಗಳು ನಮ್ಮ ರಾಜ್ಯಗಳಲ್ಲಿ ಬಂಡವಾಳ ಹೂಡಲು ಆಸಕ್ತಿ ವಹಿಸುತ್ತಿವೆ ಎಂದು ಹೇಳಿದರು. ಆದರೆ ಯಾವ ರಾಜ್ಯದಿಂದ ಎಂದು ನಿರ್ದಿಷ್ಟವಾಗಿ ಉಲ್ಲೇಖ ಮಾಡಲು ನಿರಾಕರಿಸಿದರು.
ಕರ್ನಾಟಕದಲ್ಲಿ ಅದರಲ್ಲೂ ಬೆಂಗಳೂರಿನಲ್ಲಿರುವ ಐಟಿ ಕಂಪನಿಗಳು ತಮಿಳುನಾಡಿಗೆ ವಲಸೆ ಹೋಗುತ್ತಿವೆ ಎಂದು ಹೇಳಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜವಂಶಸ್ಥ, ಸಂಸದ ಯದುವೀರ್ ಅವರ ಅಜ್ಜ ಮದನ್ ಗೋಪಾಲ್ ಇನ್ನಿಲ್ಲ

ಸಿಎಂ ಕುರ್ಚಿ ರೇಸ್‌ನಲ್ಲಿ ನೀವಿದ್ದೀರಾ ಎಂದಿದ್ದಕ್ಕೆ ಪರಮೇಶ್ವರ್ ಪ್ರತಿಕ್ರಿಯೆ ಹೀಗಿತ್ತು

ಇಟಲಿ ಟೆಂಪಲ್ ಸುತ್ತಿ ಕಪ್ಪ ಒಪ್ಪಿಸಿದರೆ ಡಿಕೆ ಶಿವಕುಮಾರ್ ಸಿಎಂ: ಆರ್ ಅಶೋಕ

ಲೋಕಾನುಭವವಿರುವ ಸಿದ್ದರಾಮಯ್ಯರಿಗೆ ಇದು ತಿಳಿದಿಲ್ವ: ತೇಜಸ್ವಿ ಸೂರ್ಯ ಪ್ರಶ್ನೆ

ಕರ್ನಾಟಕದ ಜನತೆಗೆ ಗುಡ್‌ನ್ಯೂಸ್‌, ಬೆಂಗಳೂರು ಮುಂಬೈ ಸೂಪರ್ ಫಾಸ್ಟ್ ರೈಲಿಗೆ ಗ್ರೀನ್ ಸಿಗ್ನಲ್

ಮುಂದಿನ ಸುದ್ದಿ
Show comments