Webdunia - Bharat's app for daily news and videos

Install App

ಗಣಿ ಹಗರಣದ ಪತ್ರ ರಾಜ್ಯಪಾಲರ ಟೇಬಲ್ ತಲುಪುತ್ತಿದ್ದ ಹಾಗೇ ಎಚ್‌ಡಿಕೆ ಉದ್ವೇಗ, ಆತಂಕ ಮಿತಿ ಮೀರಿದೆ

Sampriya
ಬುಧವಾರ, 21 ಆಗಸ್ಟ್ 2024 (20:23 IST)
ಬೆಂಗಳೂರು: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ಹಿಂದೆ ಸಿಎಂ ಆಗಿದ್ದಾಗ ಗಣಿ ಗುತ್ತಿಗೆ ಮಂಜೂರು ಮಾಡಿದ ಆರೋಪ ಹಗರಣವನ್ನು ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲು ಲೋಕಾಯುಕ್ತ ಎಸ್‌ಐಟಿ ಅಭಿಯೋಜನಾ ಮಂಜೂರಾತಿ (ಪ್ರಾಸಿಕ್ಯೂಷನ್) ಕೋರಿ ರಾಜ್ಯಪಾಲರಿಗೆ ಮರು ಪ್ರಸ್ತಾವ ಸಲ್ಲಿಸಿರುವುದು ಇದೀಗ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

ಇನ್ನೂ ಈ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ಹಾಗೂ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಮಧ್ಯೆ ವಾಕ್ಸಮರ ಜೋರಾಗಿದೆ. ಮುಲಾಜಿಲ್ಲದೆ ಕುಮಾರಸ್ವಾಮಿ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಹೇಳಿದ ಸಿದ್ದರಾಮಯ್ಯ ಹೇಳಿಕೆಗೆ ಕುಮಾರಸ್ವಾಮಿ ಅವರು ನನ್ನನ್ನು ಮುಟ್ಟಕ್ಕೆ ನೂರು ಸಿದ್ದರಾಮಯ್ಯ ಬರ್ಬೇಕು ಎಂದು ಕೌಂಟರ್ ಕೊಟ್ಟಿದ್ದಾರೆ.

ಇದೀಗ ಈ ಸಂಬಂಧ ಕಾಂಗ್ರೆಸ್‌ ಸಾಮಾಜಿಕ ಜಾಲತಾಣದಲ್ಲಿ ಎಕ್ಸ್‌ನಲ್ಲಿ ಪೋಸ್ಟ್ ಹಾಕಿ, ಎಚ್‌ಡಿಕೆ ವಿರುದ್ಧ ಪತ್ರ ರಾಜ್ಯಪಾಲರ ಟೇಬಲ್ ತಲುಪುತ್ತಿದ್ದ ಹಾಗೇ ಅವರಲ್ಲಿ ಉದ್ವೇಗ, ಆತಂಕ ಮಿತಿ ಮೀರಿ ಹೇಳಿಕೆ ನೀಡುತ್ತಿದ್ದಾರೆ ಎಂದು ಬರೆದುಕೊಂಡಿದೆ.

ಕಳ್ಳನ ಮನಸು ಉಳ್ಳುಳ್ಳಗೆ!

ಗಣಿ ಹಗರಣದ ತನಿಖೆಗೆ ಅನುಮತಿ ಕೋರಿದ ಮತ್ತೊಂದು ಪತ್ರ ರಾಜ್ಯಪಾಲರ ಟೇಬಲ್ ತಲುಪುತ್ತಿದ್ದಂತೆಯೇ ಎಚ್‌ಡಿ ಕುಮಾರಸ್ವಾಮಿ ಅವರಲ್ಲಿ ಉದ್ವೇಗ, ಆತಂಕ ಮಿತಿ ಮೀರಿದೆ.

ಆ ಆತಂಕದಲ್ಲೇ ಓಡೋಡಿ ಬಂದು ಮಾಧ್ಯಮಗಳ ಮುಂದೆ ಮನಬಂದಂತೆ ಮಾತಾಡುತ್ತಿದ್ದಾರೆ, ನನ್ನನ್ನು ಬಂಧಿಸಲು ಸಾಧ್ಯವೇ ಇಲ್ಲ ಎಂದು ಕಾನೂನಿಗೆ ಸವಾಲು ಹಾಕುತ್ತಿದ್ದಾರೆ.

ಕುಮಾರಸ್ವಾಮಿಯವರೇ, ಉಪ್ಪು ತಿಂದವರು ನೀರು ಕುಡಿಯಲೇಬೇಕು, ನೀವು ಉಪ್ಪು ತಿಂದಾಗಿದೆ ನೀರು ಕುಡಿಯುವ ಸಮಯ ಸಮೀಪಿಸುತ್ತಿದೆ.

ತಯಾರಾಗಿರಿ!<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಮುಂದಿನ ಸುದ್ದಿ
Show comments