Webdunia - Bharat's app for daily news and videos

Install App

ಅಸಾನಿ' ಚಂಡಮಾರುತದ ಎಫೆಕ್ಟ್: ಮುಂದಿನ 48 ಗಂಟೆಗಳ ಕಾಲ ರಾಜ್ಯದಲ್ಲಿ ಭಾರಿ ಮಳೆ

Webdunia
ಭಾನುವಾರ, 20 ಮಾರ್ಚ್ 2022 (20:45 IST)
ಮುಂದಿನ 48 ಗಂಟೆಗಗಳು ರಾಜಧಾನಿ ಸೇರಿದಂತೆ ಕರ್ನಾಟಕದ ವಿವಿಧಡೆ ಗುಡುಗು ಸಹಿತ ಭಾರಿ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ
 
ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಪ್ರದೇಶಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಹೇಳಿದೆ.
 
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಅಸಾನಿ ಚಂಡಮಾರುತದ ಪರಿಣಾಮದಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಮೀನುಗಾರರಿಗೆ ಮುಂದಿನ 24 ಗಂಟೆ ಯಾವುದೇ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿಲ್ಲವಾದರೂ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದೆ.
 
ಬೆಂಗಳೂರು, ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಮತ್ತು ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಮತ್ತು ಗದಗ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
 
ಮಧ್ಯಾಹ್ನದ ವೇಳೆ ನಗರದಲ್ಲಿ ಭಾನುವಾರ 30 ಡಿಗ್ರಿ ಉಷ್ಣಾಂಶ ದಾಖಲಾಗಿದೆ. ಮುಂದಿನ 48 ಗಂಟೆಗಳು ಗರಿಷ್ಠ ಉಷ್ಣಾಂಶ 34 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
 
ಎರಡು ದಿನದಿಂದ ವರುಣಾರ್ಭಟ:
 
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಶುಕ್ರವಾರ ಸಂಜೆಯಿಂದ ಮಳೆಯಾಗುತ್ತಿದೆ. ಬೇಸಿಗೆಯಲ್ಲಿ ಮಳೆ ಬಂದಿರುವುದಕ್ಕೆ ಜನರು ಮತ್ತು ರೈತಾಪಿ ವರ್ಗ ಸಂತಸಗೊಂಡಿದ್ದಾರೆ. ಕೆಲ ಸಿಡಿಲು, ಗಾಳಿಯ ಆರ್ಭಟ ಕೂಡ ಕಂಡು ಬಂದಿದೆ.
 
ಗಾಳಿಯ ಅಬ್ಬರಕ್ಕೆ  ಹಾನಿ:
 
ಗಾಳಿಯ ಅಬ್ಬರಕ್ಕೆ ಮನೆ, ಕಟ್ಟಡಗಳ ಚಾವಣಿಗೆ ಹಾನಿಯಾಗಿದೆ. ದಕ್ಷಿಣ ಕನ್ನಡ ಸೇರಿದಂತೆ ವಿವಿಧ ಕಡೆ ಅಡಕೆ, ತೆಂಗು ಬೆಳೆಗೆ ಹಾನಿಯಾಗಿದೆ. ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿಯೂ ಮಳೆಯಾಗಿದೆ.
 
ಸಿಲಿಕಾನ್ ಸಿಟಿಯಲ್ಲಿ ಮೊದಲ ವರ್ಷಧಾರೆ:
 
ಈ ವರ್ಷದ ಮೊದಲ ಮಳೆ ಬೆಂಗಳೂರು ನಗರದಲ್ಲಿ ನಿನ್ನೆ (ಶನಿವಾರ) ಸುರಿದಿದೆ. ಕೆಲವು ಪ್ರದೇಶಗಳಲ್ಲಿ  ರಸ್ತೆಯ ತುಂಬೆಲ್ಲನೀರು ಹರಿದು ಹೋಗುವಷ್ಟು ಮಳೆಯಾಗಿದೆ. ಕೆಲವು ಬಡಾವಣೆಗಳಲ್ಲಿ ತುಂತುರು ಮಳೆಯಾಗಿದೆ. ಜನರು ಮಳೆ ಫೋಟೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಸಂತಸ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತದ ಮೇಲೆ 50 ಶೇಕಡಾ ಸುಂಕದ ಬರೆ ಹಾಕಿದ ಡೊನಾಲ್ಡ್ ಟ್ರಂಪ್

ಭುವನೇಶ್ವರ: ಸ್ನೇಹಿತನಿಂದ ಬ್ಲ್ಯಾಕ್‌ಮೇಲ್‌: ಹೆದರಿ ಪೆಟ್ರೋಲ್ ಹಚ್ಚಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ

ಹೆಲ್ಮೆಟ್ ಇಲ್ಲದೆ, ಪೆಟ್ರೋಲ್ ಇಲ್ಲ: ಪೆಟ್ರೋಲ್ ಹಾಕಿಸಿಕೊಳ್ಳಲು ಬೈಕ್ ಸವಾರ ಮಾಡಿದ ಕಸರತ್ತು ವೈರಲ್

ವಿಕ್ಟೋರಿಯಾ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ದಿಡೀರ್ ಭೇಟಿ ಹಿಂದಿನ ಕಾರಣ ಇಲ್ಲಿದೆ

ಧರ್ಮಸ್ಥಳ: ನಿರ್ಣಾಯಕ ಘಟಕ್ಕೆ ತಲುಪುತ್ತಿರುವಾಗಲೇ ಮತ್ತೊಬ್ಬ ಅಪರಿಚಿತ ಎಂಟ್ರಿ

ಮುಂದಿನ ಸುದ್ದಿ
Show comments