ಸಿದ್ದುಗೆ ಅಶೋಕ್​​ ಸವಾಲ್

Webdunia
ಗುರುವಾರ, 4 ಮೇ 2023 (16:20 IST)
ನಾನು ಕೂಡ ಬಜರಂಗಿ.. ನಮ್ಮ ಮನೆ ಹತ್ತಿರ ಬನ್ನಿ ನೋಡೊಣ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ KPCC ಅಧ್ಯಕ್ಷ ಡಿ.ಕೆ ಶಿವಕುಮಾರ್​​​ಗೆ ಸಚಿವ ಆರ್​​.ಅಶೋಕ್​ ಸವಾಲು ಹಾಕಿದ್ದಾರೆ. ರಾಮನಗರದಲ್ಲಿ ಮಾತನಾಡಿದ ಅವರು, ಎಲ್ಲರೂ ಕೂಡ RSS, ಬಜರಂಗದಳದಿಂದ ಬಂದಿರೋದು. ನಿಮಗೆ ಬ್ಯಾನ್ ಮಾಡೋಕೆ ತಾಕತ್ತು, ಧಮ್ ಇದೆಯಾ ಎಂದು ಪ್ರಶ್ನಿಸಿದ್ರು.. ಪಾಕಿಸ್ತಾನಕ್ಕೆ ಜೈ ಅನ್ನೋ ಸಂಸ್ಕಾರ ನಮ್ಮದಲ್ಲ. ಕಾಂಗ್ರೆಸ್​ ಆಂಜನೇಯನ ಬಾಲಕ್ಕೆ ಬೆಂಕಿ ಇಟ್ಟಿದೆ.ಇದು ಇಡೀ ಕಾಂಗ್ರೆಸ್​​ ಅನ್ನೇ ಸುಟ್ಟು ಸರ್ವನಾಶ ಮಾಡುತ್ತೆ‌ ಎಂದು ಕಿಡಿಕಾರಿದ್ರು.. ಬಜರಂಗದಳ ಬ್ಯಾನ್ ವಿಚಾರದಿಂದ ಕಾಂಗ್ರೆಸ್ ಇನ್ನಷ್ಟು ಸ್ಥಾನ ಕಳೆದುಕೊಳ್ಳುತ್ತೆ. ಹಿಂದೂ ರಕ್ಷಣೆ ಮಾಡುವವವರು ಬಜರಂಗದಳದವರು. ದೇಶ, ದೇವಸ್ಥಾನಗಳನ್ನು ರಕ್ಷಣೆ ಮಾಡೋದು ಬಜರಂಗದಳ. ಕಾಂಗ್ರೆಸ್​​ನವರು ಬಜರಂಗದಳವನ್ನು PFIಗೆ ಹೋಲಿಸುವುದನ್ನು ನಾನು ಖಂಡಿಸುತ್ತೇನೆ ಎಂದು ಹೇಳಿದ್ರು. ಹಿಂದೂ ವಿರೋಧಿ ಭಾವನೆಯನ್ನು ಕಾಂಗ್ರೆಸ್​ ವ್ಯಕ್ತಪಡಿಸಿದೆ.. ಇದಕ್ಕೆ ವಿರೋಧ ವ್ಯಕ್ತಪಡಿಸಿ ಎಲ್ಲ ಕಡೆ ಪ್ರತಿಭಟನೆ ನಡೆಯುತ್ತಿದೆ. ಇದೇ ಕಾರಣಕ್ಕೆ ಎಲ್ಲಾ ಕಡೆ ಹನುಮಾನ್ ಚಾಲೀಸಾ ಪಠಣ ಮಾಡಲಾಗುತ್ತದೆ. ಕಾಂಗ್ರೆಸ್​​ ದೇಶದಲ್ಲಿ ಸರ್ವನಾಶವಾಗುತ್ತದೆ. ಲಂಕೆಯಲ್ಲಿ ರಾವಣ ಸಂಹಾರ ಆದ ರೀತಿ ರಾಜ್ಯದಲ್ಲಿ ಕಾಂಗ್ರೆಸ್​​ ಧೂಳಿಪಟವಾಗುತ್ತದೆ‌. ಚುನಾವಣೆ ಸಂದರ್ಭದಲ್ಲಿ ಇದೆಲ್ಲವೂ ಕಾಂಗ್ರೆಸ್​​ಗೆ ವ್ಯತಿರಿಕ್ತವಾಗುತ್ತದೆ‌ ಎಂದು ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆನ್‌ಲೈನ್‌ ಗೇಮ್ ದಾಸನಾದ ಮಗನಿಂದ ಮೊಬೈಲ್ ಕಿತ್ತುಕೊಂಡಿದ್ದೆ ತಪ್ಪಾಯಿತು

ಬಂಗಾಳದಲ್ಲಿ ಹುಟ್ಟಿ ಬೆಳೆದ, ಬಿಜೆಪಿ ಕಾರ್ಯಕರ್ತನೇ ಮುಂದಿನ ಸಿಎಂ: ಅಮಿತ್ ಶಾ

ಅವರು ಜಲ್ಮುರಿ ಭರವಸೆ ನೀಡಿದ್ರು, ನಾನು ಬೇಲ್‌ಪುರಿ ನೀಡುತ್ತೇನೆ: ಮಮತಾ ಬ್ಯಾನರ್ಜಿ

ಬೇಸಿಗೆ ರಜೆಯಲ್ಲಿ ಊರಿಗೆ ತೆರಳಲು ಪ್ಲ್ಯಾನ್ ಮಾಡಿದ್ದವರಿಗೆ ರೈಲ್ವೆ ಇಲಾಖೆಯಿಂದ ಗುಡ್‌ನ್ಯೂಸ್‌

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ಇಬ್ಬರು ಯುವ ಕೃಷಿಕರು ಸಾವು

ಮುಂದಿನ ಸುದ್ದಿ
Show comments