ಐ.ಟಿ. ಬಿ. ಟಿ. ಕಂಪನಿಗಳ ಜೊತೆ ಅಶ್ವಥ್ ನಾರಾಯಣ ಸಭೆ

Webdunia
ಬುಧವಾರ, 7 ಸೆಪ್ಟಂಬರ್ 2022 (14:02 IST)
ಬೆಂಗಳೂರು : ಮೂರು ದಿನಗಳಿಂದ ಮಳೆಗೆ ಇಡೀ ಬೆಂಗಳೂರೆ ನಲುಗಿ ಹೋಗಿದೆ.ನಿವಾಸಿಗಳ ಸಂಕಷ್ಟಕ್ಕೆ ಒಳಗಾಗಿದ್ದು, ಎನ್‌ ಡಿ ಆರ್‌ ಎಫ್‌ ನಿಂದ ರಕ್ಷಣೆ ಮಾಡಿದ್ದಾರೆ.
ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಐಟಿ-ಬಿಟಿ ಕಂಪನಿಗಳ ಸಂಕಷ್ಟ ಆಲಿಸಲು ಸರ್ಕಾರ ಮುಂದಾಗಿದೆ.
 
ಐಟಿ-ಬಿಟಿ ಕಂಪನಿಗಳು ಮಳೆಯಿಂದ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಲು, ಸಚಿವ ಡಾ.ಸಿ.ಎನ್‌. ಅಶ್ವತ್ಥ ನಾರಾಯಣ ಅವರು ಸಂಜೆ 5 ಗಂಟೆಗೆ ನಾನಾ ಸಾಫ್ಟ್‌ವೇರ್‌ ಕಂಪನಿಗಳ ಮುಖ್ಯಸ್ಥರ ಹಾಗೂ ಪ್ರತಿನಿಧಿಗಳ ಸಭೆ ಕರೆದಿದ್ದಾರೆ.
ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಯಲಿರುವ ಈ ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಬಿಬಿಎಂಪಿ ಮುಖ್ಯ ಆಯುಕ್ತರು, ಜಲಮಂಡಳಿ, ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳು, ನಗರ ಪೊಲೀಸ್‌ ಆಯುಕ್ತರೂ ಸೇರಿದಂತೆ ಹಲವರು ಪಾಲ್ಗೊಳ್ಳಲಿದ್ದಾರೆ. ಸಚಿವ ಅಶ್ವತ್ತ ನಾರಾಯಣ ಈ ಸಭೆಯ ನೇತೃತ್ವವಹಿಸಲಿದ್ದಾರೆ.
 
ಸರ್ಕಾರ ಕರೆದಿರುವ ಈ ಸಭೆಯಲ್ಲಿ ಇನ್ಫೋಸಿಸ್‌, ವಿಪ್ರೊ, ಎಂಫಸಿಸ್‌, ನಾಸ್ಕಾಂ, ಗೋಲ್ಡ್ಮನ್‌ ಸ್ಯಾಕ್ಸ್‌, ಇಂಟೆಲ್‌, ಟಿಸಿಎಸ್‌, ಫಿಲಿಫ್ಸ್‌, ಸೊನಾಟಾ ಸಾಫ್ಟ್‌ವೇರ್‌ ಮುಂತಾದ ಕಂಪನಿಗಳ ಮುಖ್ಯಸ್ಥರು ಅಥವಾ ಇಲ್ಲವೇ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ನಾಳೆ ಲಾಲ್‌ ಕ್ವಿಲಾ ಮೆಟ್ರೋ ನಿಲ್ದಾಣ ಬಂದ್‌

ದೆಹಲಿ ಕಾರು ಸ್ಫೋಟ: ಅಮಿತ್ ಶಾ ರಾಜೀನಾಮೆಗೆ ಹೆಚ್ಚಿದ ಒತ್ತಾಯ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಲಾಲೋಕ ಮಳಿಗೆ, ಏನೆಲ್ಲಾ ಸಿಗಲಿದೆ ಗೊತ್ತಾ

ಕಾರು ಸ್ಫೋಟದ ಹಿಂದಿನ ಪ್ರತಿಯೊಬ್ಬ ಅಪರಾಧಿಯನ್ನು ಭೇಟೆಯಾಡಿ: ಅಮಿತ್ ಶಾ

ದೆಹಲಿಯಲ್ಲಿ ಕಾರು ಸ್ಫೋಟ: ರಾಜ್ಯದ ಈ ಜಿಲ್ಲೆಯಲ್ಲಿ ಹೆಚ್ಚಿನ ಭದ್ರತೆ

ಮುಂದಿನ ಸುದ್ದಿ
Show comments