Select Your Language

Notifications

webdunia
webdunia
webdunia
webdunia

ಮಂಗಳೂರಿನಲ್ಲಿ ಎಎಸ್ಐ ಮೇಲೆ ಮಾರಣಾಂತಿಕ ಹಲ್ಲೆ

ಮಂಗಳೂರಿನಲ್ಲಿ ಎಎಸ್ಐ ಮೇಲೆ ಮಾರಣಾಂತಿಕ ಹಲ್ಲೆ
ಮಂಗಳೂರು , ಬುಧವಾರ, 5 ಏಪ್ರಿಲ್ 2017 (10:22 IST)
ಮಂಗಳೂರಿನಲ್ಲಿ ಕಳೆದ ರಾತ್ರಿ ಎಎಸ್ಐ ಒಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ರಾತ್ರಿ ಪಾಳಿಯಲ್ಲಿದ್ದ ಎಎಸ್ಐ ಐತಪ್ಪ ಮೇಲೆ ಬೈಕ್`ನಲ್ಲಿ ಬಂದ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ.

ಲೇಡಿ ಹಿಲ್ ಬಳಿ ಅಪಾಚೆ ಬೈಕ್`ನಲ್ಲಿ ಬಂದ ದುಷ್ಕರ್ಮಿಗಳು ರಾಡ್`ನಿಂದ ಎಎಸ್ಐ ಮೇಲೆ ಹಲ್ಲೆ ನಡೆಸಿದ್ದಾರೆ. ಗಂಭೀರ ಗಾಯಗೊಂಡಿರುವ ಎಎಸ್ಐ ಐತಪ್ಪ ಅವರನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಿನ್ನೆ ಅನುಮತಿ ಪಡೆಯದೇ ಪಿಎಫ್ಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದ ಸಂದರ್ಭ ಎಎಸ್ಐ ಲಾಠಿಚಾರ್ಜ್ ಮಾಡಿದ್ದರು. ಈ ಸಂದರ್ಭ ಪೊಲೀಸರನ್ನ ಬಿಡುವುದಿಲ್ಲ ಎಂದು ಪಿಎಫ್ಐ ಕಾರ್ಯಕರ್ತರು ಕೂಗಿದ್ದರು. ಹೀಗಾಗಿ, ಘಟನೆಯಲ್ಲಿ ಸಂಘಟನೆ ಕಾರ್ಯಕರ್ತರ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ. ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ವಿಶೇಷ ತಂಡ ರಚಿಸಿದ್ದು, ಕಾರ್ಯಾಚರಣೆ ನಡೆಸುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ವಕೀಲರಿಗೆ ಕೊಡಲು ನನ್ನ ಕಿಸೆಯಿಂದ ಹಣ ಖರ್ಚು ಮಾಡಬೇಕೇ? : ಸಿಎಂ ಕೇಜ್ರಿವಾಲ್