Webdunia - Bharat's app for daily news and videos

Install App

ಹಿಂದು ಸಂಘಟನೆಗಳಿಂದಲೇ ಹತ್ಯೆಗಳಾಗುತ್ತಿವೆ: ಸಚಿವ ರಮಾನಾಥ್ ರೈ

Webdunia
ಭಾನುವಾರ, 7 ಜನವರಿ 2018 (12:26 IST)
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಸರಣಿ ಹತ್ಯೆಗಳು ಹಿಂದು ಸಂಘಟನೆಗಳಿಂದಲೇ ನಡೆಯುತ್ತಿವೆ ಎಂದು ಸಚಿವ ರಮಾನಾಥ್ ರೈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. 
ಮಾಧ್ಯಮಗಳೊಂದಿಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ರೈ, ಬಶೀರ್ ಹತ್ಯೆಯ ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳಿಗೆ ಹಿಂದು ಸಂಘಟನೆಗಳ ನಂಟಿದೆ ಎಂದು ಕಿಡಿಕಾರಿದ್ದಾರೆ.
 
47 ವರ್ಷ ವಯಸ್ಸಿನ ಬಶೀರ್ ಎನ್ನುವವರನ್ನು ಆರೋಪಿಗಳು ಹತ್ಯೆ ಮಾಡಿದ್ದು, ದೀಪಕ್ ರಾವ್ ಹತ್ಯೆಗೆ ಪ್ರತಿಕಾರವಾಗಿ ಬಶೀರ್ ಹತ್ಯೆ ಮಾಡಿರುವುದಾಗಿ ಆರೋಪಿಗಳು ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದರು.
 
ಸಚಿವ ರಮಾನಾಥ್ ರೈ, ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಹಿಂದು ಸಂಘಟನೆಗಳಿಂದಲೇ ಹತ್ಯೆಗಳಾಗುತ್ತಿವೆ ಎಂದು ಕಿವಿ ತುಂಬುತ್ತಿರುವುದು ಮಾಧ್ಯಮಗಳ ಕ್ಯಾಮರಾ ಕಣ್ಣಿಗೆ ಸೆರೆ ಸಿಕ್ಕಿದೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments