Webdunia - Bharat's app for daily news and videos

Install App

ಪ್ರೀತಿ ಸೇಡು ಸ್ನೇಹಿತನನ್ನೇ ಇರಿದು ಕೊಂದ ಹಂತಕರು

Webdunia
ಮಂಗಳವಾರ, 11 ಜುಲೈ 2023 (19:37 IST)
ಚಂದ್ರಾಲೇಔಟ್ ಪೊಲೀಸ್ ಠಾಣೆಯಲ್ಲಿ ಕಿಡ್ನ್ಯಾಪ್ ಕೇಸ್ ಒಂದು ದಾಖಲಾಗಿತ್ತು. ತಾಹಿರ್ ಎಂಬಾತನನ್ನ ಆಟೋದಲ್ಲಿ ಬಂದವರು ಅಪಹರಿಸಿ ಹೋಗಿದ್ರು. ತಕ್ಷಣ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿ ನಂತರ ದೂರು ಕೂಡ ದಾಖಲಿಸಿಕೊಂಡಿದ್ರು. ಆದ್ರೆ ಅದ್ಯಾವುದೂ ಪ್ರಯೋಜನಕ್ಕೆ ಬರಲಿಲ್ಲ. ಹಂತಕರು ತಾಹೀರ್ ನನ್ನ ಅದಾಗಲೆ ಮೂಟೆ ಕಟ್ಟಿದ್ರು.ತಾಹೀರ್ ,ಹಿಂದೂಸ್ಥಾನ್ ಕಂಪನಿಯಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡಿಕೊಂಡಿದ್ದ. ಬದುಕು ನೆಟ್ಟಗೆ ನಡೀತಿತ್ತು. ಒಂದಷ್ಟು ಸ್ನೇಹಿತರ ಪಟಾಲಂ ಕೂಡ ಇತ್ತು. ಹೀಗೆ ಇದ್ದುಬಿಟ್ಟಿದ್ದರೆ ಬಹುಶಃ ಈ ರೀತಿ ಭೀಕರವಾಗಿ ಸಾವನ್ನಪ್ಪುತ್ತಿರಲಿಲ್ವೇನೋ.. ಆದ್ರೆ  17-18 ವಯಸ್ಸಿನಲ್ಲಿಯೇ ಪ್ರೀತಿಗೆ ಬಿದ್ದಿದ್ದ. ಇತ್ತ ಆಪ್ತ  ಸ್ನೇಹಿತನಾಗಿದ್ದ ನ್ಯಾಮತ್ ಕೂಡ ಅದೇ ಹುಡುಗೀನ ಪ್ರೀತಿಸುತ್ತಿದ್ದ. ಇದು ಇಬ್ಬರ ನಡುವ ಬಿರುಕು ಬಿಡಲು ಶುರುವಾಗಿತ್ತು. ಅದೇ ವಿಚಾರವಾಗಿ ಇಬ್ಬರ ನಡುವೆ ಜಗಳವಾಗಿ ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿತ್ತು.

ಇಬ್ಬರು ಬಡಿದಾಡಿಕೊಂಡ ಹಿನ್ನಲೆ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಒಂದು ವರ್ಷದ ಹಿಂದೆ ದೂರು ಕೂಡ ದಾಖಲಾಗಿತ್ತು. ಈ ಹಿಂದೆ ಚಾಮರಾಜಪೇಟೆಗೆ ಹೊಂದಿಕೊಂಡಂತಿರುವ ಟಿಪ್ಪು ನಗರದಲ್ಲಿ ವಾಸ ಮಾಡ್ತಿದ್ದ ತಾಹೀರ್ ಕುಟುಂಬ, ಕಿರಿಕ್ ನಡೆದ ಬಳಿಕ ಚಂದ್ರಲೇಔಟ್ ಗೆ ಶಿಫ್ಟ್ ಆಗಿದ್ದರು. ಇನ್ನು ಈ ಜಗಳ ಅಷ್ಟಕ್ಕೆ ನಿಲ್ಲಲಿಲ್ಲ. ಇಬ್ಬರೂ ತನ್ನ ಸ್ನೇಹಿತರ ಜೊತೆ ನ್ಯಾಮತ್ ನ ಕೊಲ್ಲೋದಾಗಿ ತಾಹೀರ್ , ತಾಹಿರ್ ನ ಕೊಲ್ಲೋದಾಗಿ ನ್ಯಾಮತ್ ಹೇಳಿಕೊಂಡು ತಿರುಗಾಡುತ್ತಿದ್ದರು.  ಈ ವಿಚಾರ ಕಿವಿಗೆ ಬಿದ್ದ ಹಿನ್ನಲೆ ನ್ಯಾಮತ್ ತನ್ನ ಸ್ನೇಹಿತರನ್ನ ಸೇರಿಸಿಕೊಂಡು ಜುಲೈ 10 ರ ರಾತ್ರಿ 11 ಗಂಟೆಗೆ ಫೋನ್ ಮಾಡಿ ಮನೆಯಿಂದ ಹೊರಗೆ ಕರೆಸಿಕೊಂಡಿದ್ದ. ನಾಯಂಡಹಳ್ಳಿ  ಮೆಟ್ರೊ ಸ್ಟೇಷನ್ ಬಳಿಯಿಂದ ತಾಹೀರ್ ನನ್ನ ಇದೇ ಆಟೋದಲ್ಲಿ ಕಿಡ್ನ್ಯಾಪ್ ಮಾಡಿದ್ರು. ವಿಚಾರ ತಿಳಿದ ತಾಹೀರ್ ತಂದೆ ಸೈಯದ್ ಮಹಬೂಬ್ ಮಗನಿಗೆ ಕರೆ ಮಾಡಿದ್ದರು. ಆತ ರಿಸೀವ್ ಮಾಡಿರಲಿಲ್ಲ. ನಂತರ ನೇರವಾಗಿ ಹಂತಕ ನ್ಯಾಮತ್ ತಂದೆ ಬಳಿ ಬಂದು ಹೇಳಿಕೊಂಡಾಗ ನ್ಯಾಮತ್ ತಂದೆ ಕೂಡ ತಮ್ಮ ಮಗನಿಗೆ ಕರೆ ಮಾಡಿ  ತಾಹೀರ್ ನನ್ನ ಕರೆತರಲು ಹೇಳಿದ್ದರು.ಆದ್ರೆ ಅದು ಕೂಡ ಸಫಲವಾಗಿರಲಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments