ಮಂಗಳೂರು ನಗರದ ಸಿಟಿ ಸಂಟರ್ ಮಾಲ್ನಲ್ಲಿ ಯುವ ಕಾಂಗ್ರೆಸ್ ನಾಯಕ ತೇಜಸ್ವಿರಾಜ್ ಅವರ ಮೆಲೆ ಭದ್ರತಾ ಸಿಬ್ಬಂದಿ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.
ಸೋಮವಾರ ಸಂಜೆ ತೇಜಸ್ವಿರಾಜ್ ಪತ್ನಿ ಜತೆ ಸಿಟಿ ಸೆಂಟರ್ಗೆ ತೆರಳಿದ್ದರು. ಈ ಸಮಯದಲ್ಲಿ ಅಲ್ಲಿ ಅಳವಡಿಸಲಾಗಿದ್ದ ಬ್ಯಾರಿಕೇಡ್ ತೆರವುಗೊಳಿಸುವಂತೆ ತೇಜಸ್ವಿ ಅವರು ಭದ್ರತಾ ಸಿಬ್ಬಂದಿಯನ್ನು ಒತ್ತಾಯಿಸಿದ್ದಾರೆ. ಆದರೆ, ಇದಕ್ಕೆ ಒಪ್ಪದ ಸಿಬ್ಬಂದಿ ಹಾಗೂ ತೇಜಸ್ವಿ ಅವರ ನಡುವೆ ವಾಗ್ವಾದ ಶುರುವಾಗಿದೆ ಎನ್ನಲಾಗುತ್ತಿದೆ.
ಈ ವೇಳೆ ಕಾಂಗ್ರೆಸ್ ಯುವ ನಾಯಕ ತೇಜಸ್ವಿಯನ್ನು ನಿಂದಿಸಿದ ಭದ್ರತಾ ಸಿಬ್ಬಂದಿ, ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.
ಹಲ್ಲೆಯಿಂದ ತೇಜಸ್ವಿ ಅವರ ತಲೆಗೆ ತೀವ್ರವಾದ ಗಾಯಗಳಾಗಿದ್ದು, ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್ಲೋಡ್ ಮಾಡಿಕೊಳ್ಳಿ