Publish Date: Tue, 17 Oct 2023 (19:20 IST)
Updated Date: Tue, 17 Oct 2023 (19:32 IST)
ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನ ಹೆಗಡೆ ನಗರದಲ್ಲಿ ನಡೆದಿದೆ. ಸಮಿ ಹಲ್ಲೆಗೊಳಗಾದ ವ್ಯಕ್ತಿ. ಏರಿಯಾ ಹುಡುಗರು ದೊಣ್ಣೆಯಿಂದ ಹಲ್ಲೆ ಮಾಡಿರುವ ಪರಿಣಾಮ ಸಮಿಗೆ ಗಂಭೀರಗಾಯವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.