Webdunia - Bharat's app for daily news and videos

Install App

ವಿವಸ್ತ್ರಗೊಳಿಸಿ ಯುವಕನ ಮೇಲೆ ಹಲ್ಲೆ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಂಜನೇಯ ಭರವಸೆ

Webdunia
ಬುಧವಾರ, 18 ಜನವರಿ 2017 (17:42 IST)
ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣದಲ್ಲಿ ದಲಿತ ಯುವಕನನ್ನು ನಗ್ನಗೊಳಿಸಿ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರೇ ತಪ್ಪು ಮಾಡಿದ್ದರು ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ಭರವಸೆ ನೀಡಿದ್ದಾರೆ.
 
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಬ್ಬಿ ಪಟ್ಟಣದಲ್ಲಿ ದಲಿತ ಯುವಕನನ್ನು ನಗ್ನಗೊಳಿಸಿ ಹಲ್ಲೆ ಮಾಡಿದ ಪ್ರಕರಕ್ಕೆ ಸಂಬಂಧಿಸಿದಂತೆ ವರದಿ ತರಿಸಿಕೊಳ್ಳುತ್ತೇನೆ. ಯಾರೇ ತಪ್ಪು ಮಾಡಿದ್ದರು ಕಠಿಣ ಕ್ರಮ ಕೈಗೊಳ್ಳುತೇನೆ ಎಂದರು.
 
ಒಂದು ವೇಳೆ ದಲಿತ ಯುವಕ ತಪ್ಪು ಮಾಡಿದ್ದರೆ ಪೊಲೀಸ್‌ರಿಗೆ ದೂರು ನೀಡಬಹುದಿತ್ತು. ಈ ರೀತಿ ಕಾನೂನು ಕೈಗೆತ್ತಿಕೊಂಡು ಹಲ್ಲೆ ಮಾಡುವ ಅಧಿಕಾರ ಯಾರಿಗೂ ಇಲ್ಲ ಎಂದು ಕಿಡಿಕಾರಿದರು.
 
ಪೇಂಟಿಂಗೆ ಕೆಲಸ ಮಾಡುತ್ತಿದ್ದ ಯುವಕ ಅಭಿಷೇಕ್ ಗುಬ್ಬಿ ಪಟ್ಟಣದ ಸುಭಾಷ್ ನಗರದ ನಿವಾಸಿ. ಈತ ಅಪ್ರಾಪ್ತ ಯುವತಿಯನ್ನು ನಿರಂತರವಾಗಿ ಚುಡಾಯಿಸುತ್ತಿದ್ದ ಎನ್ನಲಾಗಿದ್ದು, ಇದರಿಂದ ರೊಚ್ಚಿಗೆದ್ದು ಯುವತಿಯ ಪೋಷಕರು, ಯುವತಿಯಿಂದಲೇ ಆತನಗಿ ಪೋನ್ ಮಾಡಿಸಿ ತೋಟದ ಮನೆಗೆ ಕರೆಸಿಕೊಂಡಿದ್ದಾರೆ. ತದನಂತರ ಈತನನ್ನು ಕಟ್ಟಿ ಹಾಕಿ, ವಿವಸ್ತ್ರಗೊಳಿಸಿ, ಚಪ್ಪಲಿ ಹಾರ ಹಾಕಿ, 'ಗುಬ್ಬಿ ಯುವತಿಯರನ್ನು ಕೆಣಕಿದರೆ ಇದೆ ಗತಿ' ಎಂದು ಬರೆದ ಸ್ಲೇಟ್ ನೀಡಿ ಅಮಾನವೀಯವಾಗಿ ವರ್ತಿಸಿದ್ದಾರೆ. ಈ ಹೇಯ ಕೃತ್ಯದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಶಿಕ್ಷೆ ಪ್ರಮಾಣ ಪ್ರಕಟಿಸಿದ ಮೇಲೆ ಪ್ರಜ್ವಲ್ ರೇವಣ್ಣ ಏನು ಮಾಡಬಹುದು

ಡಾ ಸಿಎನ್ ಮಂಜುನಾಥ್ ಪ್ರಕಾರ ಜೀವನದಲ್ಲಿ ಸಂತೋವಿರಬೇಕಾದರೆ ಈ ಮೂರು ಪದಗಳನ್ನು ಬಿಡಬೇಕು

ಅಮೆರಿಕಾಗೆ ಮಣಿದು ರಷ್ಯಾದಿಂದ ತೈಲ ಖರೀದಿ ನಿಲ್ಲಿಸಿದೆಯಾ ಭಾರತ: ಟ್ರಂಪ್ ಹೇಳಿದ್ದೇನು

ರಾಹುಲ್ ಗಾಂಧಿ ಮತಗಳ್ಳತನ ಶಬ್ಧಕೋಶಕ್ಕೆ ಸೇರ್ಪಡೆಯಾಗುತ್ತೆ: ಸುರೇಶ್ ಕುಮಾರ್

ಮುಂದಿನ ಸುದ್ದಿ
Show comments