ಕಳಪೆ ಕಾಮಗಾರಿ ಪ್ರಶ್ನಿಸಿದ್ದಕ್ಕೆ ಕಾಂಗ್ರೆಸ್ ಮುಖಂಡ ತಾಯಪ್ಪ ಎಂಬವರ ಗ್ರಾಮ ಪಂಚಾಯಿತ್ ಸದಸ್ಯ ನರಸಿಂಹ ಮೂರ್ತಿ ಬೆಂಬಲಿಗರು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆಂದು ಆರೋಪಿಸಲಾಗಿದೆ. ಗಾಯಾಳುವಿಗೆ ದೇವನಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ದೇವನಹಳ್ಳಿಯ ಕುರುಬುರ ಕುಂಟೆ ಗ್ರಾಮದಲ್ಲಿ ನರೇಗಾ ಯೋಜನೆಯ ರಸ್ತೆ ಚರಂಡಿ ಕಾಮಗಾರಿಗೆ ಹೆಚ್ಚಿನ ಹಣ ಮಂಜೂರಾಗಿದ್ದಲ್ಲದೇ ಕಳಪೆ ಕಾಮಗಾರಿ ನಿರ್ವಹಿಸಿರುವ ಕುರಿತು ಸ್ಥಳೀಯ ಕಾಂಗ್ರೆಸ್ ಮುಖಂಡ ತಾಯಪ್ಪ ಎಂಬವರು ಪ್ರಶ್ನಿಸಿದ್ದಕ್ಕೆ ಅವರ ಮೇಲೆ ನರಸಿಂಹ ಮೂರ್ತಿ ಬೆಂಬಲಿಗರು ಹಲ್ಲೆ ನಡೆಸಿದರೆಂದು ಆರೋಪಿಸಲಾಗಿದೆ.ಈ ಕುರಿತು ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ