Webdunia - Bharat's app for daily news and videos

Install App

ಪೆಟ್ರೋಲ್ ಬಂಕ್ ಸಿಬ್ಬಂದಿಗಳ ಮೇಲೆ ಹಲ್ಲೆ: ಇಬ್ಬರು ಪುಂಡರ ಬಂಧನ, ಘಟನೆ ಸಿಸಿಟಿವಿಯಲ್ಲಿ ಸೆರೆ

Webdunia
ಗುರುವಾರ, 30 ಸೆಪ್ಟಂಬರ್ 2021 (21:07 IST)
ಬೆಂಗಳೂರು: ನಗರದ ಪೆಟ್ರೋಲ್ ಬಂಕ್ ಸಿಬ್ಬಂದಿಗಳ ಮೇಲೆ ಇಬ್ಬರು ಪುಂಡರಿಂದ ಹಲ್ಲೆ ನೆಡೆದಿದೆ. ಬಾಗಲಗುಂಟೆ ಬಸ್ ನಿಲ್ದಾಣದ ಬಳಿ ಇರುವ ಗ್ಯಾಸೊಲಿನ್ ಪೆಟ್ರೋಲ್ ಬಂಕ್ ನಲ್ಲಿ  ಕ್ಷುಲ್ಲಕ ಕಾರಣಕ್ಕೆ ನಾಲ್ಕು ದಿನದ ಹಿಂದೆ ಮಧ್ಯರಾತ್ರಿ ವೇಳೆಯಲ್ಲಿ ಚಾಕು ತೋರಿಸಿ ತಿವಿಯಲು ಹೋಗಿರುವ ಘಟನೆ ಇದೀಗ ಬೆಳಕಿಗೆ ಬಂದಿದೆ. 
 
ಅಂಜನ್ ಎನ್ನುವ ಬಂಕ್ ಸಿಬ್ಬಂದಿಗೆ ಹಲ್ಲೆ ಮಾಡಿದ ಪುಂಡರು ಬೈಕ್ ನಲ್ಲಿ ಬಂದಿದ್ದರು. ಮದ್ಯಪಾನ ಹಾಗೂ ಗಾಂಜಾ ಮತ್ತಿನಲ್ಲಿದ್ದ  ಆರೋಪಿಗಳು ಪೆಟ್ರೋಲ್ ಹಾಕಿಸುವ ವಿಚಾರವಾಗಿ ಕ್ಯಾತೆ ತೆಗೆದಿದ್ದಾರೆ. ಮಲ್ಲಸಂದ್ರದ ನಿವಾಸಿ ಮೋಹನ್(25) ಮತ್ತು  ಸುಮಂತ್(26) ಎನ್ನುವ ಯುವಕರನ್ನು ಸ್ಥಳದಲ್ಲಿಯೇ ಪೊಲೀಸರು ವಶಕ್ಕೆ ಪಡೆದಿದ್ದರು. ಯುವಕರ ಬಳಿಯಿದ್ದ ಚಾಕು ಕೂಡ ಜಪ್ತಿ ಮಾಡಿದ್ದರು. ಈ ಎಲ್ಲಾ ದೃಶ್ಯಗಳು ಸಿ.ಸಿ ಕ್ಯಾಮಾರದಲ್ಲಿ ಸೆರೆಯಾಗಿದ್ದವು . 
 
ಘಟನೆಗೆ ಒಂದು ವರದ ಹಿಂದೆ ಕೂಡ ನೆಡೆದಿದ್ದ ಫೈಟ್: 
 
ಕ್ಷುಲ್ಲಕ ಕಾರಣಕ್ಕೆ ಘಟನೆ ನೆಡೆದ ಒಂದು ವರದ ಹಿಂದೆ ಕೂಡ ಸಿಬ್ಬಂದಿಗಳ ಜೊತೆಗೆ ಜಗಳ ನೆಡೆದಿತ್ತು, ಅದೇ ಸಿಟ್ಟಿನಲ್ಲಿ ಹಲ್ಲೆ ನೆಡೆಸಿರುವುದು ಪ್ರಾಥಮಿಕ ತನಿಖೆಯ ವೇಳೆ ತಿಳಿದು ಬಂದಿದೆ. ಈ ಸಂಭಂದ ಇಬ್ಬರೂ ಯುವಕರನ್ನು ಬಂಧಿಸಿದ್ದೇವೆ, ಠಾಣೆಯಲ್ಲಿ ಪ್ರಕರಣ ದಾಖಲಿಸಕೊಂಡು ಮುಂದಿನ ಕ್ರಮಕ್ಕೆ ಮುಂದಾಗಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Rains: ಈ ವಾರ ತಗ್ಗುತ್ತಾ ಮಳೆಯ ಅಬ್ಬರ

ಅತ್ಯಾಚಾರ ಪ್ರಕರಣದಲ್ಲಿ ಬಿಜೆಡಿ ಕಾರ್ಪೊರೇಟರ್ ಬಂಧನ, ಪಕ್ಷದಿಂದ ಅಮಾನತು

ತಮಿಳುನಾಡಿನ ಚೋಳರ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ: 140 ಕೋಟಿ ಭಾರತೀಯರ ಕಲ್ಯಾಣಕ್ಕೆ ಪ್ರಾರ್ಥನೆ

ಹರಿದ್ವಾರ ಕಾಲ್ತುಳಿತ, ಇದು ಅಪಘಾತವಲ್ಲ, ಆಡಳಿತ ವ್ಯವಸ್ಥೆಯ ವೈಫಲ್ಯ: ಕೇಜ್ರಿವಾಲ್

ರಾಜ್ಯದಲ್ಲಿ ರಸಗೊಬ್ಬರದ ಕಾಳದಂಧೆ: ಸರ್ಕಾರದ ವಿರುದ್ಧ ಜು.28ರಂದು ಪ್ರತಿಭಟನೆ, ವಿಜಯೇಂದ್ರ

ಮುಂದಿನ ಸುದ್ದಿ
Show comments