ಟಿವಿ 9 ವರದಿಗಾರ್ತಿ ಮೇಲೆ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಸಚಿವ ಡಿಕೆ ಶಿವಕುಮಾರ್ ವಿರುದ್ಧ ತನಿಖೆಗೆ ಕೋರ್ಟ್ ಪೊಲೀಸರಿಗೆ ಆದೇಶಿಸಿದೆ. ಬೆಂಗಳೂರಿನ 7ನೇ ಎಸಿಎಂಎಂ ಕೋರ್ಟ್ ಈ ಪ್ರಕರಣದ ವಿಚಾರಣೆ ನಡೆಸಿ ತನಿಖೆಗೆ ಆದೇಶ ನೀಡಿದೆ. ಸ್ಟಿಂಗ್ ಕಾರ್ಯಾಚರಣೆಗೆ ಹೋಗಿದ್ದಾಗ ತಮ್ಮ ಮೇಲೆ ಹಲ್ಲೆ ನಡೆಸಿ ಲೈಂಗಿಕ ಕಿರುಕುಳ ನೀಡಿದ್ದರು ಎಂದು ಪೊಲೀಸರಿಗೆ ದೂರು ನೀಡಿದ್ದರೂ ಎಫ್ಐಆರ್ ದಾಖಲಿಸಿರಲಿಲ್ಲ.
ಒಂದು ವಾರದ ನಂತರ ಶಿವಕುಮಾರ್ ಹೆಸರನ್ನು ಬಿಟ್ಟು ಎಫ್ಐಆರ್ ದಾಖಲಿಸಿದ್ದರು ಎಂದು ಬೆಂಗಳೂರಿನ ಎಸಿಎಂಎಂ ಕೋರ್ಟ್ನಲ್ಲಿ ವರದಿಗಾರ್ತಿ ದೂರು ನೀಡಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್ ತನಿಖೆಗೆ ಆದೇಶ ನೀಡಿದೆ.
ಕೋರ್ಟ್ಗೆ ಪ್ರಕರಣ ತನಿಖೆ ಸರಿಯಾಗಿ ನಡೆದಿಲ್ಲವೆಂದು ಮನವರಿಕೆಯಾಗಿರುವುದರಿಂದ ಜೂನ್ 7ರೊಳಗೆ ತನಿಖೆಯ ವರದಿ ನೀಡುವಂತೆ ಸೂಚಿಸಿರುವುದಾಗಿ ತಿಳಿಸಿದೆ.