Select Your Language

Notifications

webdunia
webdunia
webdunia
webdunia

ಪಂಚ ರಾಜ್ಯಗಳ ಚುನಾವಣೆ ಸೋಲು: ರಾಜ್ಯ ನಾಯಕರಿಗೆ ಹೈಕಮಾಂಡ್ ವಾರ್ನಿಂಗ್

ಪಂಚ ರಾಜ್ಯಗಳ ಚುನಾವಣೆ ಸೋಲು: ರಾಜ್ಯ ನಾಯಕರಿಗೆ ಹೈಕಮಾಂಡ್ ವಾರ್ನಿಂಗ್
ಬೆಂಗಳೂರು , ಶುಕ್ರವಾರ, 20 ಮೇ 2016 (11:42 IST)
ಪಂಚ ರಾಜ್ಯಗಳ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಹಿನ್ನೆಲೆಯಲ್ಲಿ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಹೊತ್ತಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ರಾಜ್ಯ ನಾಯಕರಿಗೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.  
 
ಪಂಚ ರಾಜ್ಯಗಳ ವಿಧಾನಸಭೆಗೆ ನಡೆದ ಚುನಾವಣೆ ಫಲಿತಾಂಶ ಅನಿರೀಕ್ಷಿತವಲ್ಲ. ಈ ಫಲಿತಾಂಶ ಬೇಸರ ತಂದಿದೆ. ಈಗಾಗಲೇ ನಾವು ವಿವಿಧೆಡೆ ಹಲವಾರು ಪರೀಕ್ಷೆಯನ್ನು ಎದುರಿಸಿದ್ದೇವೆ. ಮುಂದೆ ಶಸ್ತ್ರ ಚಿಕಿತ್ಸೆಗೊಳಪಡುವುದು ಬೇಡ ಎಂದು ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡುವ ಮೂಲಕ ರಾಜ್ಯ ಕಾಂಗ್ರೆಸ್ ನಾಯಕರಿಗೆ ಪರೋಕ್ಷವಾಗಿ ಎಚ್ಚರಿಕೆಯ ಸಂದೇಶವನ್ನು ರವಾನೆ ಮಾಡಿದ್ದಾರೆ.
 
ರಾಜ್ಯ ಕಾಂಗ್ರೆಸ್ ಉಸ್ತವಾರಿ ಸಚಿವ ದಿಗ್ವಿಜಯ್ ಸಿಂಗ್ ಕಾಂಗ್ರೆಸ್ ಸೋಲಿನ ಕುರಿತು ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿದ ಬೆನ್ನಲ್ಲೆ ಕಾಂಗ್ರೆಸ್ ವರಿಷ್ಠರು ಆಕ್ಷೇಪ ವ್ಯಕ್ತ ಪಡಿಸಿದ್ದಾರೆ.ಚುನಾವಣೆ ಸೋಲಿನ ಕುರಿತು ಪಕ್ಷದಲ್ಲಿ ಆಂತರಿಕವಾಗಿ ಚರ್ಚೆ ನಡೆಸಬೇಕಿತ್ತು. ಈ ರೀತಿಯಾಗಿ ಬಹಿರಂಗವಾಗಿ ಸಂದೇಶ ರವಾನಿಸುವುದು ಅಸಮಂಜಸ ಎಂದು ಕಾಂಗ್ರೆಸ್ ವರಿಷ್ಠರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ..

Share this Story:

Follow Webdunia kannada

ಮುಂದಿನ ಸುದ್ದಿ

ಹಣದ ದಾಹಕ್ಕೆ ಮಡದಿಯನ್ನೇ ಮಾರಿದ ಪಾಪಿ ಪತಿರಾಯ