Select Your Language

Notifications

webdunia
webdunia
webdunia
webdunia

ಚುನಾವಣೆಯಲ್ಲಿ ರಾಮನಗರದಿಂದಲೇ ಸ್ಪರ್ಧಿಸುವೆ: ಕುಮಾರಸ್ವಾಮಿ ಘೋಷಣೆ

ರಾಮನಗರ
ತುಮಕೂರು , ಶನಿವಾರ, 17 ಡಿಸೆಂಬರ್ 2016 (13:38 IST)
ರಾಮನಗರ ನನ್ನ ಕರ್ಮಭೂಮಿ. ಮುಂದಿನ ಚುನಾವಣೆಯಲ್ಲಿ ರಾಮನಗರದಿಂದಲೇ ಸ್ಪರ್ಧಿಸುವೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಜೆಡಿಎಸ್ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದರು. 
 
ಹುಟ್ಟಹಬ್ಬದ ಹಿನ್ನೆಲೆಯಲ್ಲಿ ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಬಂಡಾಯ ಶಾಸಕರದ್ದು ಮುಗಿದ ಅಧ್ಯಾಯ. ಈಗಾಗಲೇ ಅವರಿಗೆ ನೋಟಿಸ್ ನೀಡಲಾಗಿದೆ ಎಂದರು.
 
ಗೋಪಾಲಯ್ಯ ಭೇಟಿಗೂ ಬಂಡಾಯ ಶಾಸಕರ ಪ್ರಕರಣಕ್ಕೂ ವ್ಯತ್ಯಾಸ ಇದೆ. ಜೆಡಿಎಸ್ ಬಂಡಾಯ ಶಾಸಕರನ್ನು ಕ್ಷಮಿಸುವುದು ಬಿಡುವುದು ಶಿಸ್ತು ಸಮಿತಿಗೆ ಬಿಟ್ಟಿದ್ದು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಜೆಡಿಎಸ್ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದರು.
 
ಮುಂಬರುವ ವಿಧಾನ ಸಭೆ ಚುನಾವಣೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಜೆಡಿಎಸ್ ಎಚ್.ಡಿ.ಕುಮಾರಸ್ವಾಮಿ ಅವರು ಉತ್ತರ ಕರ್ನಾಟಕದಿಂದ ಸ್ಪರ್ಧಿಸುತ್ತಾರೆ ಎಂದು ಹೇಳಲಾಗುತ್ತಿತ್ತು. ಆದರೆ, ರಾಮನಗರ ನನ್ನ ಕರ್ಮಭೂಮಿ. ಮುಂದಿನ ಚುನಾವಣೆಯಲ್ಲಿ ರಾಮನಗರದಿಂದಲೇ ಸ್ಪರ್ಧಿಸುವೆ ಎಂದು ಎಚ್‌ಡಿಕೆ ಸ್ಪಷ್ಟಪಡಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಕರುಣಾನಿಧಿಯನ್ನು ಭೇಟಿಯಾದ ರಾಹುಲ್ ಗಾಂಧಿ