ವಿಧಾನಪರಿಷತ್‌ನಲ್ಲೂ ಪ್ರತಿಧ್ವನಿಸಿದ ಡೈರಿ ಗಲಾಟೆ: ಬಿಜೆಪಿ ಸಭಾತ್ಯಾಗ

Webdunia
ಗುರುವಾರ, 16 ಮಾರ್ಚ್ 2017 (13:49 IST)
ವಿಧಾನಸಭೆಯ ಕಲಾಪದಲ್ಲಿ ಡೈರಿ ವಿವಾದ ಕೋಲಾಹಲ ಸೃಷ್ಟಿಸಿದ ಬೆನ್ನಲ್ಲೆ ವಿಧಾನಪರಿಷತ್‌ನಲ್ಲೂ ಡೈರಿ ಗಲಾಟೆ ಪ್ರತಿಧ್ವನಿಸಿತು.
 
ನಿಲುವಳಿ ಸೂಚನೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರ ನಡುವೆ ವಾಕ್ಸಮರ ಏರ್ಪಟ್ಟು ಬಿಜೆಪಿ ಸದಸ್ಯರು ಸಭಾತ್ಯಾಗ ಮಾಡಿದರು.  
 
ವಿಧಾನಪರಿಷತ್ ಕಲಾಪ ಆರಂಭವಾಗುತ್ತಿದ್ದಂತೆ ಡೈರಿ ಗದ್ದಲ ಭುಗಿಲೆದ್ದಿತು. ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಡೈರಿ ವಿಷಯದ ಬಗ್ಗೆ ಚರ್ಚಿಸಲು ನಿಲುವಳಿ ಸೂಚನೆ ಮಂಡನೆಗೆ ಅವಕಾಶ ನೀಡುವಂತೆ ಸಭಾಧ್ಯಕ್ಷರಲ್ಲಿ ಕೋರಿದರು. 
 
ಈಶ್ವರಪ್ಪ ಕೋರಿಕೆಯಿಂದ ಕೆಂಡಾಮಂಡಲವಾದ ಕಾಂಗ್ರೆಸ್ ನಾಯಕರು ಸಹಾರಾ ಡೈರಿಯಲ್ಲಿ ಮೋದಿಗೆ ಹಣ ನೀಡಿರುವ ಬಗ್ಗೆ ಪ್ರಸ್ತಾಪಿಸಿ ಎಂದಾಗ ಉಭಯ ಪಕ್ಷಗಳ ಸದಸ್ಯರ ಮಧ್ಯೆ ವಾಗ್ವಾದ ನಡೆಯಿತು. ಸದನದಲ್ಲಿ ತೀವ್ರ ಕೋಲಾಹಲ, ಗದ್ದಲಕ್ಕೆ ಕಾರಣವಾಯಿತು.
 
ಸಭಾಪತಿ ಡಿ.ಎಚ್.ಶಂಕರ್‌ಮೂರ್ತಿ ವಿಪಕ್ಷಗಳ ಮನವಿಗೆ ಮಣಿಯದೆ ಕಳೆದ ಬಾರಿಯೇ ನಿಲುವಳಿ ಸೂಚನೆಗೆ ಅವಕಾಶ ನೀಡಲಾಗಿದೆ. ಈ ಬಾರಿ ನಿಯಮಾವಳಿಯಲ್ಲಿ ಅವಕಾಶವಿಲ್ಲ ಎಂದಾಗ ವಿಪಕ್ಷಗಳು ಆಕ್ರೋಶಗೊಂಡು ಸಭಾತ್ಯಾಗಕ್ಕೆ ಮುಂದಾದವು.  
 
ಪ್ರಧಾನಿ ಮೋದಿ ಅವರ ಹೆಸರು ಕೂಡಾ ಸಹಾರಾ ಡೈರಿಯಲ್ಲಿ ಉಲ್ಲೇಖವಾಗಿದೆ ಎಂದು ಸಿಎಂ ಸಿದ್ದರಾಮಯ್ಯ, ವಿಪಕ್ಷ ನಾಯಕ ಈಶ್ವರಪ್ಪಗೆ ಲೇವಡಿ ಮಾಡಿದರು. ಯಡಿಯೂರಪ್ಪ ಚೆಕ್ ಪಡೆದು ಭ್ರಷ್ಟಾಚಾರವೆಸಗಿರುವುದನ್ನು ಮರೆತಿದ್ದಾರೆ ಎಂದು ಟೀಕಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ನೇಹಮಯಿ ಕೃಷ್ಣಗೆ ನಕಲಿ ಆಡಿಯೋ ನೀಡಿದ್ದ ವ್ಯಕ್ತಿಗೆ ಬಂಧನ ಭಾಗ್ಯ

23 ಗಂಟೆಗಳ ವಿಚಾರಣೆಗೆ ಒಳಪಡಿಸುತ್ತಿದ್ದ ಹಾಗೇ ಶಾಲಿನಿ ರಜನೀಶ್ ವಿರುದ್ಧ ಉಲ್ಟಾ ಹೊಡೆದ ಸ್ನೇಹಮಯಿ ಕೃಷ್ಣ

ಸಿಎಂ ಕುರ್ಚಿಗಾಗಿ ಹೆಚ್ಚಿದ ಗುದ್ದಾಟ: ಕುತೂಹಲ ಮೂಡಿಸಿದ ಡಿಸಿಎಂ ಆಪ್ತ ಶಾಸಕನ ಹೇಳಿಕೆ

ಮುಂದಿನ ತಿಂಗಳೊಳಗೆ ದೇಶದಲ್ಲಿ ನಕ್ಸಲಿಸಂ ಅಂತ್ಯ; ಅಮಿತ್‌ ಶಾ

ಪಾಕ್ ಮಸೀದಿ ಸ್ಫೋಟಕ್ಕೆ 'ಸೇಡು ತೀರಿಸಿಕೊಳ್ಳಲು' ಎಲ್‌ಇಟಿ ದಾಳಿಗೆ ಸಂಚು

ಮುಂದಿನ ಸುದ್ದಿ
Show comments