Webdunia - Bharat's app for daily news and videos

Install App

ಕಾವೇರಿ ವಿವಾದ: ಸದನದ ನಿರ್ಣಯ ಎತ್ತಿ ಹಿಡಿಯುವಂತೆ ಸರಕಾರಕ್ಕೆ ಸಲಹೆ.....

Webdunia
ಶನಿವಾರ, 1 ಅಕ್ಟೋಬರ್ 2016 (20:05 IST)
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಯಾವುದೇ ಕಾರಣಕ್ಕೂ ಸುಪ್ರೀಂಕೋರ್ಟ್ ಆದೇಶದಂತೆ ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಬಿಡದಂತೆ ಹಾಗೂ ಕಾವೇರಿ ನಿರ್ವಹಣಾ ಮಂಡಳಿಗೆ ರಾಜ್ಯದ ಸದಸ್ಯರನ್ನು ನೇಮಕ ಮಾಡದಂತೆ ಸರ್ವಪಕ್ಷ ಸಭೆಯಲ್ಲಿ ಒಮ್ಮತದ ನಿರ್ಣಯ ಕೈಗೊಳ್ಳಲಾಗಿದೆ. 
 
ಕಾವೇರಿ ನದಿಯಿಂದ ತಮಿಳುನಾಡಿಗೆ ಅಕ್ಟೋಬರ್ 1 ರಿಂದ 6 ರವರೆಗೂ ಒಟ್ಟು 36 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡುವಂತೆ ನಿನ್ನೆ ಸುಪ್ರೀಂಕೋರ್ಟ್ ಆದೇಶ ನೀಡಿತ್ತು. ಹೀಗಾಗಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಸರ್ವಪಕ್ಷ ಸಭೆ ಕರೆಯಲಾಗಿತ್ತು. 
 
ಸರ್ವಪಕ್ಷ ಸಭೆಯಲ್ಲಿ ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ರಾಜ್ಯ ಸರಕಾರ ಹಾಗೂ ಪ್ರತಿಪಕ್ಷ ನಾಯಕರು ವಿರೋಧ ವ್ಯಕ್ತಪಡಿಸಿದ್ದು, ಕಾವೇರಿ ನಿರ್ವಹಣಾ ಮಂಡಳಿ ರಾಜ್ಯದ ಸದಸ್ಯರನ್ನು ನೇಮಕ ಮಾಡದಂತೆ ಒಕ್ಕೊರಲು ನಿರ್ಣಯ ಕೈಗೊಳ್ಳಲಾಗಿದೆ. 
 
ಕಾವೇರಿ ವಿಚಾರದಲ್ಲಿ ಸುಪ್ರೀಂಕೋರ್ಟ್ ನೀಡಿರುವ ಆದೇಶವನ್ನು ಮರುಪರಿಶೀಲನೆ ನಡೆಸುವಂತೆ ಮೇಲ್ಮನವಿ ಸಲ್ಲಿಸುವುದು ಹಾಗೂ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಕೇಂದ್ರ ಸಚಿವರಾದ ಡಿ.ವಿ.ಸದಾನಂದಗೌಡ ಅವರು ಸಲಹೆ ನೀಡಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಶೂ ನೆಕ್ಕಲು ಸಹ ಅರ್ಹನಲ್ಲ: ಅಧಿಕಾರಿಗಳ ವಿರುದ್ಧ ಜಾತಿ ನಿಂದನೆ ದೂರು ಕೊಟ್ಟ ಇಂಡಿಗೋ ಸಿಬ್ಬಂದಿ

ಜಮ್ಮುನಲ್ಲಿ ಲ್ಯಾಂಡಿಂಗ್‌ ಆಗಬೇಕಿದ್ದ ಏರ್‌ ಇಂಡಿಯಾ ವಿಮಾನ ದೆಹಲಿಗೆ ವಾಪಸ್‌: ಕಾರಣ ನಿಗೂಢ

ಬೆಂಗಳೂರಿನಲ್ಲಿ ಏನಾಗುತ್ತಿದೆ, ಯುವತಿಗೆ ಹಾಡಹಗಲೇ ಮೈಕೈ ಮುಟ್ಟಿ ಲೈಂಗಿಕ ಕಿರುಕುಳ

ಕ್ಯಾನ್ಸರ್‌ನಿಂದ ಕೊನೆ ದಿನ ಎಣಿಸುತ್ತಿದ್ದ ಅಜ್ಜಿಯನ್ನು ಕಸದ ರಾಶಿಗೆ ಎಸೆದು ಹೋದ ಮೊಮ್ಮಗ

ಇಸ್ರೇಲ್‌ ನಡುವಿನ ಸಂಘರ್ಷ: ಇರಾನ್‌ಗೆ ರಫ್ತಾಗದೆ ಭಾರತದಲ್ಲೇ ಉಳಿದ 1ಲಕ್ಷ ಟನ್ ಬಾಸ್ಮತಿ

ಮುಂದಿನ ಸುದ್ದಿ
Show comments