Webdunia - Bharat's app for daily news and videos

Install App

ರೈತ ಸಂಘದಿಂದ ನೆರೆ ಸಂತ್ರಸ್ತರಿಗೆ ನೆರವು

Webdunia
ಶನಿವಾರ, 25 ಆಗಸ್ಟ್ 2018 (18:25 IST)
ಕೊಡಗಿನ ನೆರೆ ಸಂತ್ರಸ್ತರಿಗೆ ನೆರವು ನೀಡಲು ಇದೀಗ ರಾಜ್ಯ ರೈತ ಸಂಘ ಮುಂದಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಹಾಗು ಶಿಡ್ಲಘಟ್ಟ ತಾಲ್ಲೂಕಿನ ರೈತರು ಕೊಡಗಿನ ಸಂತ್ರಸ್ತರಿಗೆ ದೇಣಿಗೆ ಸಂಗ್ರಹಿಸಿದ್ದಾರೆ.  

ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಛೇರಿಯ ಮುಂದೆ ಸೇರಿದ ನೂರಾರು ಜನ ರೈತರು, ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಸಂಗ್ರಹಿಸಿರುವ ದೇಣಿಗೆ ನೀಡಿದ್ದಾರೆ.

ಇನ್ನು ಇದೇ ಸಂದರ್ಭದಲ್ಲಿ ಮಾತನಾಡಿದ ಕೋಡಿಹಳ್ಳಿ ಚಂದ್ರಶೇಖರ್ , ರಾಜ್ಯ ರೈತ ಸಂಘದಿಂದ ಕೊಡಗಿನ ಸಂತ್ರಸ್ತರಿಗೆ ಅಗತ್ಯ ವಸ್ತುಗಳ ಪೂರೈಕೆಯ ಜೊತೆಗೆ 500 ಜನ ರೈತರ ತಂಡ ಅಲ್ಲಿ ಒಂದು ತಿಂಗಳ ಕಾಲ ಶ್ರಮದಾನ ಮಾಡಲಿದ್ದಾರೆ ಎಂದರು.  ಹತ್ತು ಟ್ರಾಕ್ಟರ್, ಜೆಸಿಬಿ ಗಳ ಮೂಲಕ ಕೆಲಸ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ. ‌ಕೊಡಗಿನಲ್ಲಿ ಪುನಃ ಮಳೆ ಶುರುವಾಗಿದ್ದು ಮಳೆ ನಿಂತ ಕೂಡಲೇ ರೈತರ ತಂಡ ತೆರಳಲಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.




ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments