ಹಲ್ಲೆ ಪ್ರಕರಣ: 'ಕಾಗೆ' ಗೆ ಜಾಮೀನು ಮಂಜೂರು ಮಾಡಿದ ನ್ಯಾಯಾಲಯ

Webdunia
ಬುಧವಾರ, 25 ಜನವರಿ 2017 (17:46 IST)
ಕಾಂಗ್ರೆಸ್ ಕಾರ್ಯಕರ್ತ ವಿವೇಕ್ ಶೆಟ್ಟಿ ಮೇಲಿನ ಮಾರಣಾಂತಿಕ ಹಲ್ಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಬಿಜೆಪಿ ಶಾಸಕ ರಾಜು ಕಾಗೆ ಸೇರಿದಂತೆ 6 ಜನ ಆರೋಪಿಗಳಿಗೆ ನ್ಯಾಯಾಲಯ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. 
 
ಕಾಗವಾಡ ಕ್ಷೇತ್ರದ ಬಿಜೆಪಿ ಶಾಸಕ ರಾಜು ಕಾಗೆ, ಸಹೋದರ ಸಿದ್ದಗೌಡ ಕಾಗೆ, ಪುತ್ರಿ ತೃಪ್ತಿ ಕಾಗೆ, ಶೋಭಾ ಕಾಗೆ ಸೇರಿದಂತೆ ಚಾಲಕ ಬಾಹುಬಲಿಗೆ ಷರತ್ತು ಬದ್ಧ ಜಾಮೀನು ನೀಡಿ ಜಿಲ್ಲಾ ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.
 
ಫೇಸ್‌ಬುಕ್‌ನಲ್ಲಿ ಕೆಟ್ಟದಾಗಿ ಕಮೆಂಟ್ ಮಾಡಿದ್ದಕ್ಕೆ ಕಾಂಗ್ರೆಸ್ ನಾಯಕನ ಮನೆಗೆ ನುಗ್ಗಿ ಬಿಜೆಪಿ ಶಾಸಕ ರಾಜು ಕಾಗೆ ಪುತ್ರಿ ಹಾಗೂ ಟೀಂ ಡೆಡ್ಲಿ ಅಟ್ಯಾಕ್ ಮಾಡಿದ ಘೋರ ಕೃತ್ಯ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಉಗಾರ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿತ್ತು. 
 
ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಕಾಗವಾಡ ಕ್ಷೇತ್ರದ ಶಾಸಕ ರಾಜು ಕಾಗೆ ಅವರ ರೌಡಿ ಗ್ಯಾಂಗ್, ಫೇಸ್‌ಬುಕ್‌ನಲ್ಲಿ ಕಮೆಂಟ್ ಮಾಡಿದ್ದ ಕಾಂಗ್ರೆಸ್ ನಾಯಕ ವಿವೇಕ ಶೆಟ್ಟಿ ಮನೆಗೆ ನುಗ್ಗಿ ಮಹಿಳೆ ಮಕ್ಕಳು ಎನ್ನುವುದನ್ನು ನೋಡದೆ ಅಟ್ಟಹಾಸ ಮೆರೆದಿದ್ದು, ಈ ಭೀಭತ್ಸ ಕೃತ್ಯದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದವು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಸ್ಟರ್ ಕ್ಲೀನ್, ಸ್ಮಶಾನ ಭೂಮಿ, ಕೆರೆ ಅಂಗಳವನ್ನು ತಮ್ಮ ಹೆಸರಿಗೆ ಮಾಡಿಕೊಂಡದ್ದು ಹೇಗೆ

ಆರೋಗ್ಯದಲ್ಲಿ ಏರುಪೇರು, ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ರ ಯತೀಂದ್ರ

ಎಐ ದುರ್ಬಳಕೆ ಬಗ್ಗೆ ಶ್ರೀಲೀಲಾ ಗರಂ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ನಟಿ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಮುಂದಿನ ಸುದ್ದಿ
Show comments