Webdunia - Bharat's app for daily news and videos

Install App

ಟಿಪ್ಪು ರೀತಿ ಸಿದ್ದರಾಮಯ್ಯ ಹತ್ಯೆ ಮಾಡಬೇಕು ಅನ್ನೋ ಬಗ್ಗೆ ಸ್ಪಷ್ಟನೆ ನೀಡಿದ ಅಶ್ವಥ್ ನಾರಾಯಣ್

Webdunia
ಗುರುವಾರ, 16 ಫೆಬ್ರವರಿ 2023 (13:06 IST)
ಟಿಪ್ಪು ರೀತಿ ಸಿದ್ದರಾಮಯ್ಯ ಹತ್ಯೆ ಮಾಡಬೇಕು ಅನ್ನೋ ಬಗ್ಗೆ ಸಚಿವ ಅಶ್ವಥ್ ನಾರಾಯಣ ಸ್ಪಷ್ಟನೆ ನೀಡಿದ್ದಾರೆ.
 
ಮಂಡ್ಯದಲ್ಲಿ ಕಸಬಾ ಮಹಾಶಕ್ತಿ ಕೇಂದ್ರದ ಕಾರ್ಯರ್ತರ ಉದ್ದೇಶಿಸಿ ಮಾತನಾಡುವಾಗ ಮಾತನಾಡಿದೆ.ಟಿಪ್ಪು ಹೆಸರು ಉಲ್ಲೇಖ ಮಾಡಿದೆ.ಟಿಪ್ಪು ಜಯಂತಿ ಯನ್ನ ಕಾಂಗ್ರೆಸ್ ಮಾಡ್ತಿದೆ.ಅದನ್ನ ಖಂಡಿಸುವಂತೆ ಆಗಬೇಕು.ಜನರಿಗೆ ನಾನು ಸ್ಪಷ್ಟವಾಗಿ ಹೇಳಿದೆ.ಬರುವ ಚುನಾವಣೆಯಲ್ಲಿ ಜನರ ಬೆಂಬಲ ನಮ್ಮ ಪರವಾಗಿ ಪಡೆದುಕೊಳ್ಳಬೇಕು.ನಾವು ಪ್ರಜಾಪ್ರಭುತ್ವ ದಲ್ಲಿ ಇದ್ದೇವೆ, ಯುದ್ಧದ ಕಾಲದಲ್ಲಿ ಇಲ್ಲ,ಪ್ರಜಾಪ್ರಭುತ್ವ ದಲ್ಲಿ ಗೆಲ್ಲಬೇಕಿದೆ.ಆ ವಿಚಾರವಾಗಿ ಹೇಳಿದ್ದೇನೆ ಹೊರತು ಬೇರೆಯ ರೀತಿ ಅಲ್ಲ.ರಾಜಕೀಯವಾಗಿ ವಿರೋಧ ಮಾಡ್ತಿದ್ದೇನೆ ವಿನಹ ವ್ಯಯಕ್ತಿಕವಾಗಿ ಅಲ್ಲ.ಗೆಲುವು ಸೋಲು ಚುನಾವಣೆ ಯಲ್ಲಿ ಇದೆ.ಓಲೈಕೆ ಮಾಡುವ ಪಕ್ಷ ಸೋಲಿಸಬೇಕು,ಬಿಜೆಪಿ ಗೆಲ್ಲಿಸಬೇಕು ಅನ್ನೋದಷ್ಟೇ ನನ್ನ ಮಾತಿನ ಉದ್ದೇಶ.ಅವರಿಗೆ ವ್ಯಯಕ್ತಿಕ ವಾಗಿ ನೋವಾಗಿದ್ರೆ ವಿಷಾಧ ವ್ಯಕ್ತಪಡಿಸ್ತೇನೆ ಎಂದು ಅಶ್ವಥ್ ನಾರಾಯಣ ಹೇಳಿದ್ದಾರೆ.
 
ಅಲ್ಲದೇ ಈ ವೇಳೆ ಇವರ ಹಾಗೆ ಸಿಎಂಗೆ  ನಾಯಿ, ಪ್ರಧಾನಿಗೆ ನರ ಹಂತಕ, ಜಾತಿ, ಧರ್ಮ ಆಧಾರಿತವಾಗಿ ಸಮಾಜ ಒಡೆಯುವ ಕೆಲಸ ಮಾಡಿಲ್ಲ.ಇವರ ಹಾಗೆ ವ್ಯಯಕ್ತಿಕವಾಗಿ ವಿರೋಧ ಮಾಡಿಲ್ಲ.ಮತ ಗೆಲ್ಲಬೇಕೇ ವಿನಹ ಮತ್ತೆ ಬೇರೇನೂ ಅಲ್ಲ. ಎಂದು ಅಶ್ವಥ್ ನಾರಾಯಣ ಸಿದ್ದರಾಮಯ್ಯಗೆ ಟಾಂಗ್ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಮುಂದಿನ ಸುದ್ದಿ
Show comments