ಅಶ್ವತ್ಥನಾರಾಯಣ V/s ಕುಮಾರಸ್ವಾಮಿ

Webdunia
ಬುಧವಾರ, 10 ಆಗಸ್ಟ್ 2022 (15:52 IST)
ಉನ್ನತ ಶಿಕ್ಷಣದ ಹುಳುಕು ಹೊರ ಬಂದಾವೆಂಬ ಭಯವೇ? ನನ್ನಲ್ಲೂ ದಾಖಲೆಗಳಿವೆ. ಬಿಚ್ಚಿದರೆ ಅವೇ ʼಸರ್ಟಿಫಿಕೇಟ್‌ ಕೋರ್ಸ್‌ʼಗಿಂತ ಬೃಹತ್‌ ಚಾಪ್ಟರ್‌ 1, ಚಾಪ್ಟರ್ 2, ಚಾಪ್ಟರ್‌ 3 ಆಗುತ್ತವೆ; ಬಿಚ್ಚಲೇ? ಎಂಬುದಾಗಿ ಸಚಿವ ಅಶ್ವತ್ಥನಾರಾಯಣ ವಿರುದ್ಧ, ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಸ್ಪೋಟಕ ಬಾಂಬ್ ಸಿಡಿಸಿದ್ದಾರೆ. ಈ ಕುರಿತಂತೆ ಸರಣಿ ಟ್ವೀಟ್ ಮಾಡಿರುವ ಅವರು, ಡಾ.ಅಶ್ವತ್ಥನಾರಾಯಣ ಅಲಿಯಾಸ್​ ನಕಲಿ ಸರ್ಟಿಫಿಕೇಟ್‌ ರಾಜ, ನಕಲಿ ಸರ್ಟಿಫಿಕೇಟ್‌ ಶೂರʼ ನನ್ನನ್ನು ಹುಡುಕುತ್ತಿದ್ದಾರೆ. ಎಲ್ಲಿದ್ಯಪ್ಪ ಕುಮಾರಸ್ವಾಮಿ? ಎಂದು ಕೇಳಿದ್ದಾರೆ. ಸದನದಲ್ಲೂ ಕಾಣಿಸಿಲ್ಲವಂತೆ, ರಾಮನಗರದಲ್ಲೂ ಕಂಡಿಲ್ಲವಂತೆ. ಕಣ್ಣಿಗೆ ಕಾಮಾಲೆ ಬಂದಿರಬೇಕು, ಜಾಣ ಕುರುಡಿರಬೇಕು ಎಂದು ಕಿಡಿಕಾರಿದ್ದಾರೆ. ಕಲಾಪವೆಂದರೆ ಮೈ ಬೆಚ್ಚಗಾಗುತ್ತಾ ಉನ್ನತ ಶಿಕ್ಷಣ ಸಚಿವರೇ? ನಿಮ್ಮ ಕೌಶಲ್ಯತೆ ಗೊತ್ತಿದೆ. ಅಕ್ರಮ ಮುಚ್ಚಿಕೊಳ್ಳಲು ಅಕ್ರಮದ ದಾಖಲೆಗಳಿದ್ದ ಬಿಬಿಎಂಪಿ ಕಟ್ಟಡಕ್ಕೇ ಬೆಂಕಿ ಹಾಕಿಸಿದ್ದಾ? ಆಪರೇಷನ್‌ ಕಮಲದಲ್ಲೂ ಕುಶಲತೆ? ಕೋಟಿ ಕೋಟಿ ಹಣ ತುಂಬಿಸಿಕೊಂಡು ಹೋಗಿ ಶಾಸಕರ ಮನೆಗಳಲ್ಲಿ ಇಟ್ಟು ಬರುವುದಾ? ಕೌಶಲ್ಯ ಮಂತ್ರಿಯಾಗಿದ್ದಕ್ಕೂ ಸಾರ್ಥಕ ಎಂದು ವ್ಯಂಗ್ಯವಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ಜೈಲಿನಲ್ಲಿ 12ಅಡಿ ಎತ್ತರದ ಬೇಲಿ, ಇದರ ಹಿಂದಿದೆ ಈ ಉದ್ದೇಶ

ಮಾಜಿ ಸಚಿವ ರಾಮಚಂದ್ರ ಗೌಡರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

ಕಾಸರಗೋಡು: ಅಪಾಯಕಾರಿ ರೀತಿಯಲ್ಲಿ ಈಜಾಡುತ್ತಿದ್ದ ಹಿನ್ನೆಲೆ ಪೊಲೀಸ್ ದಾಳಿ

ಒಬ್ಬ ಸಚಿವನೂ ಸಾಂತ್ವನ ಹೇಳಲು ಬರಲಿಲ್ಲ, ವಿಶಾಖಪಟ್ಟಣದ ದೋಣಿ ದುರಂತದ ಸಂಬಂಧ ಆಂಧ್ರ ಸರ್ಕಾರಕ್ಕೆ ಜಗನ್ ರೆಡ್ಡಿ ಕ್ಲಾಸ್

ಬದರಿನಾಥ ದೇಗುಲ ಹಣ ಕಳ್ಳತನ: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments