Select Your Language

Notifications

webdunia
webdunia
webdunia
webdunia

ಬಿಜೆಪಿ ಸೇರ್ಪಡೆ ಸತ್ಯಕ್ಕೆ ದೂರವಾದ ಸಂಗತಿ: ಬಿ.ಎಲ್.ಶಂಕರ್

ಬಿಜೆಪಿ ಸೇರ್ಪಡೆ ಸತ್ಯಕ್ಕೆ ದೂರವಾದ ಸಂಗತಿ: ಬಿ.ಎಲ್.ಶಂಕರ್
ಬೆಂಗಳೂರು , ಬುಧವಾರ, 1 ಮಾರ್ಚ್ 2017 (20:00 IST)
ಬಿಜೆಪಿಗೆ ಸೇರ್ಪಡೆಯಾಗುತ್ತೇನೆ ಎನ್ನುವ ವರದಿಗಳು ಆಧಾರರಹಿತ. ಸತ್ಯಕ್ಕೆ ದೂರವಾದ ವಿಷಯ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಬಿ.ಎಲ್.ಶಂಕರ್ ಹೇಳಿದ್ದಾರೆ. 
 
ಬಿಜೆಪಿಗೆ ಸೇರ್ಪಡೆ ವಿಚಾರ ಸುಳ್ಳಿನ ಕಂತೆ. ನನಗೆ ಯಾರೂ ಬಿಜೆಪಿಗೆ ಬನ್ನಿ ಎಂದು ಕರೆದಿಲ್ಲ. ಯಾವುದೇ ಕಾರಣಕ್ಕೂ ಬಿಜೆಪಿ ಸೇರಲ್ಲ ಎಂದು ಗಾಳಿಸುದ್ದಿಗಳಿಗೆ ಬ್ರೆಕ್ ಹಾಕಿದ್ದಾರೆ.
 
ಹಿರಿಯರು ಸೇರಿದಂತೆ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವಂತೆ ಕಾಂಗ್ರೆಸ್ ಹೈಕಮಾಂಡ್ ಕೆಪಿಸಿಸಿಗೆ ಸ್ಪಷ್ಟ  ನಿರ್ದೆಶನ ನೀಡಿದೆ. ಕಾಂಗ್ರೆಸ್ ಮುಖಂಡರು ಬಿಜೆಪಿ ಸೇರುವ ಅನಿವಾರ್ಯತೆ ಎದುರಾಗಿಲ್ಲ ಎಂದು ತಿರುಗೇಟು ನೀಡಿದರು.
 
ಕುಮಾರ್ ಬಂಗಾರಪ್ಪ, ಪರಿಮಳ ನಾಗಪ್ಪ ಮತ್ತು ಬಿ.ಎಲ್.ಶಂಕರ್ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎನ್ನುವ ವರದಿಗಳು ಹರಡಿದ್ದವು. ವರದಿಗಳಿಂದ ತಬ್ಬಿಬ್ಬಾದ ಬಿ.ಎಲ್.ಶಂಕರ್ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಶ್ರೀರಾಮುಲು ನಮಗೆ ರಾಜಕೀಯವಾಗಿ ಆಧಾರ ಸ್ಥಂಭ: ಸೋಮಶೇಖರ್ ರೆಡ್ಡಿ