Webdunia - Bharat's app for daily news and videos

Install App

ಇನ್ನಾದರೂ ಪಾಕ್ ಪಾಠ ಕಲಿಯಲಿ: ಜಗದೀಶ್ ಶೆಟ್ಟರ್

Webdunia
ಗುರುವಾರ, 29 ಸೆಪ್ಟಂಬರ್ 2016 (20:15 IST)
ಪಾಕ್ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿದ ಭಾರತೀಯ ಸೇನಾಪಡೆಗಳು ಸೀಮಿತ ದಾಳಿ ನಡೆಸಿ ಉಗ್ರರ ಹತ್ಯೆಗೈದ ನಂತರವಾದರೂ ಪಾಕಿಸ್ತಾನ ಪಾಠ ಕಲಿಯಲಿ. ಪ್ರಧಾನಿ ಮೋದಿ ತಾವು ನೀಡಿದ ಹೇಳಿಕೆಯಂತೆ ಪ್ರತೀಕಾರ ತೀರಿಸಿಕೊಂಡಿದ್ದಾರೆ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
 
ಕಾಶ್ಮೀರದ ಉರಿ ಪ್ರದೇಶದಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳುತ್ತೇವೆ ಎಂದು ಕೇರಳದ ಕೋಳಿಕ್ಕೋಡ್‌ನಲ್ಲಿ ನಡೆದ ಕಾರ್ಯಕಾರಣಿ ಸಭೆಯಲ್ಲಿ ಪ್ರಧಾನಿ ಮೋದಿ ಹೇಳಿದ್ದರು. ಇದೀಗ ಅವರು ಅದನ್ನು ಮಾಡಿ ತೋರಿಸಿದ್ದಾರೆ ಎಂದು  ಮೋದಿ ನಿಲುವನ್ನು ಸ್ವಾಗತಿಸಿದ್ದಾರೆ.
 
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರ ನಿರ್ದೇಶನದ ಮೇರೆಗೆ ಭಾರತೀಯ ಸೇನೆ ಪಾಕ್ ಆಕ್ರಮಿತ ಕಾಶ್ಮೀರದ ಒಳಗೆ ನುಗ್ಗಿ ಉಗ್ರರ ರುಂಡವನ್ನು ಚೆಂಡಾಡಿದೆ. ಇನ್ನಾದರು ಉಗ್ರರನ್ನು ಸಾಕುವುದನ್ನು ಪಾಕಿಸ್ತಾನ ಬಿಡಬೇಕು ಎಂದು ಒತ್ತಾಯಿಸಿದರು.
 
ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ......
 
ಸುಪ್ರೀಂಕೋರ್ಟ್ ಸೂಚನೆಯಂತೆ ಕೇಂದ್ರ ಜಲ ಸಂಪನ್ಮೂಲ ಸಚಿವೆ ಉಭಯ ರಾಜ್ಯಗಳ ಅಧಿಕಾರಿಗಳೊಂದಿಗೆ ಸಂಧಾನ ಸಭೆ ನಡೆಸಿದ್ದಾರೆ. ನಾನು ಸಿಎಂ ಆದ ಸಮಯದಲ್ಲಿ ಬೆಂಗಳೂರಿನಲ್ಲಿ ಸಂಧಾನ ಸಭೆ ನಡೆಸಿದ್ದೆ. ಆದರೆ, ನಮ್ಮ ನಿಲುವಿಗೆ ತಮಿಳುನಾಡು ಸಿಎಂ ಜಯಲಲಿತಾ ಒಪ್ಪಿಗೆ ಸೂಚಿಸಿರಲಿಲ್ಲ. ಅದೇ ರೀತಿ ಈಗ ಸಹ ನಡೆದುಕೊಂಡಿದ್ದಾರೆ ಎಂದರು.
 
ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡಿರುವ ತೀರ್ಪು ದುರದೃಷ್ಟಕರ. ಸಂಕಷ್ಟದ ಸಮಯದಲ್ಲೂ ತಮಿಳುನಾಡಿಗೆ ನೀರು ಹರಿಸಿದ್ದೇವೆ. ಇನ್ನೂ ಮುಂದೆ ನೀರು ಬಿಡಲು ಸಾಧ್ಯವಿಲ್ಲ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಖಡಕ್ ಸಂದೇಶ ರವಾನಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನದ ಬೆಲೆ ಇಂದು ಇನ್ನೂ ಎತ್ತರ ಇನ್ನೂ ಹತ್ತಿರ

Jammu Kashmir cloud burst: ಮೇಘಸ್ಪೋಟಕ್ಕೆ ಹರಿದು ಬಂತು ಕಟ್ಟಡಗಳು, ವಾಹನಗಳು: ವಿಡಿಯೋ

DGP Om Prakash Rao ಹತ್ಯೆಯಾಗಿದ್ದು ಹೇಗೆ, ಪತ್ನಿ ಪಲ್ಲವಿ ಹೇಳಿದ್ದು ಕೇಳಿದರೆ ಬೆಚ್ಚಿ ಬೀಳ್ತೀರಿ

DK Shivakumar: ಡಿಕೆ ಶಿವಕುಮಾರ್ ಟೆಂಪಲ್ ರನ್ ಹಿಂದಿದೆ ಭಾರೀ ಲೆಕ್ಕಾಚಾರ: ಬಿಜೆಪಿಗೆ ಗಡ ಗಡ

Karnataka Weather: ರಾಜ್ಯದಲ್ಲಿ ಈ ವಾರ ಮಳೆಯಿರಲಿದೆಯೇ ಇಲ್ಲಿದೆ ಸಂಪೂರ್ಣ ಹವಾಮಾನ ವರದಿ

ಮುಂದಿನ ಸುದ್ದಿ
Show comments