Select Your Language

Notifications

webdunia
webdunia
webdunia
webdunia

ನೀವಾದರೂ ಸಾಲ ಮನ್ನಾ ಮಾಡಿ: ಸಚಿವ ಎಂ.ಬಿ.ಪಾಟೀಲ್‌‌ಗೆ ರೈತರ ದುಂಬಾಲು

ನೀವಾದರೂ ಸಾಲ ಮನ್ನಾ ಮಾಡಿ: ಸಚಿವ ಎಂ.ಬಿ.ಪಾಟೀಲ್‌‌ಗೆ ರೈತರ ದುಂಬಾಲು
ವಿಜಯಪುರ , ಶುಕ್ರವಾರ, 9 ಜೂನ್ 2017 (17:04 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಲ ಮನ್ನಾ ಮಾಡುತ್ತಿಲ್ಲ. ನೀವಾದರೂ ರೈತರ ಸಾಲವನ್ನು ಮನ್ನಾ ಮಾಡಿ ಎಂದು ರೈತರು ಸಚಿವ ಎಂ.,ಬಿ.ಪಾಟೀಲ್‌ಗೆ ಒತ್ತಾಯಿಸಿದ್ದಾರೆ.
 
ಸಮಸ್ಯೆಗಳನ್ನು ಆಲಿಸಲು ಬಂದ ಸಚಿವ ಪಾಟೀಲ್‌ಗೆ ಘೇರಾವ್ ಹಾಕಿದ ರೈತರು, ರೈತರಿಗೆ ಸೂಕ್ತ ಪರಿಹಾರ ದೊರೆಯುತ್ತಿಲ್ಲ. ಸಂಕಷ್ಟಗಳು ಮಿತಿ ಮೀರಿವೆ. ಕೂಡಲೇ ಸರಕಾರ ರೈತರ ನೆರವಿಗೆ ಮುಂದಾಗಬೇಕು ಎಂದು ಮನವಿ ಮಾಡಿದರು.
 
ಸಚಿವ ಪಾಟೀಲ್ ಮತ್ತು ರೈತರ ಮಧ್ಯೆ ಕೆಲ ಕಾಲ ವಾಗ್ವಾದ ನಡೆದು ವಿಕೋಪಕ್ಕೆ ತೆರಳುವ ಹಂತದಲ್ಲಿ ಪೊಲೀಸರು ಮಧ್ಯಪ್ರವೇಶಿಸಿ ರೈತರನ್ನು ಸಮಾಧಾನ ಪಡಿಸಿದರು.
 
ಮುಖ್ಯಮಂತ್ರಿ ಸಿದ್ದರಾಮಯ್ಯ ರೈತರ ಸಾಲ ಮನ್ನಾ ಕುರಿತಂತೆ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಯಾವುದೇ ರೀತಿಯ ಆತಂಕ ಬೇಡ. ಸರಕಾರ ನಿಮ್ಮ ಜೊತೆಗಿದೆ ಎಂದು ಜಲಸಂಪನ್ಮೂಲ ಖಾತೆ ಸಚಿವ ಎಂ.ಬಿ.ಪಾಟೀಲ್ ಭರವಸೆ ನೀಡಿದ್ದಾರೆ.

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ವಿದ್ಯುತ್ ಖರೀದಿಯಲ್ಲಿ ಸಾವಿರಾರು ಕೋಟಿ ಅವ್ಯವಹಾರ: ಕುಮಾರಸ್ವಾಮಿ ಆರೋಪ