ಎಟಿಎಂ ದಾಳಿಕೋರ ಬೆಂಗಳೂರು ಪೊಲೀಸರ ವಶಕ್ಕೆ ಸಿಗುವುದು ಡೌಟು

Webdunia
ಭಾನುವಾರ, 5 ಫೆಬ್ರವರಿ 2017 (11:16 IST)
ಬರೊಬ್ಬರಿ ಮೂರು ವರ್ಷಗಳ ಬಳಿಕ ಆಂಧ್ರದ ಚಿತ್ತೂರಿನಲ್ಲಿ ಸಿಕ್ಕಿ ಬಿದ್ದಿರುವ ಎಟಿಎಂ ದಾಳಿಕೋರ ಮಧುಕರ್ ರೆಡ್ಡಿ ಕರ್ನಾಟಕ ಪೊಲೀಸರ ವಶಕ್ಕೆ ಸಿಗುವ ಸಾಧ್ಯತೆಗಳು ಕಡಿಮೆ ಎಂದು ಹೇಳಲಾಗುತ್ತಿದೆ.
ಆರೋಪಿ ಮಧುಕರ್ ರೆಡ್ಡಿ ಸದ್ಯ ಮದನಪಲ್ಲಿ ಪೊಲೀಸರ ವಶದಲ್ಲಿದ್ದು, ಇಂದು ಆತನನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿ ಹೆಚ್ಚಿನ ವಿಚಾರಣೆಗಾಗಿ 15 ದಿನಗಳ ಕಾಲ ನಮ್ಮ ವಶಕ್ಕೆ ಒಪ್ಪಿಸಿ ಎಂದು ಮನವಿ ಮಾಡಿಕೊಳ್ಳಲಿದ್ದಾರೆ. 
 
ಇತ್ತ ಬೆಂಗಳೂರು ಪೊಲೀಸರು ಆರೋಪಿ ಬಗ್ಗೆ ಎಲ್ಲ ಮಾಹಿತಿಗಳನ್ನು ಸಂಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಕಾರ್ಪೋರೇಶನ್ ಬ್ಯಾಂಕ್ ಎಟಿಎಂನಲ್ಲಿ ದಾಳಿ ನಡೆಸಿದ್ದು ನಾನೇ ಎಂದು ಆರೋಪಿ ಒಪ್ಪಿಕೊಂಡಿದ್ದಾನೆ. ಆದರೆ ಬೆಂಗಳೂರು ಪೊಲೀಸರು ಮಹಜರ್ ಪಡೆದು ಫ್ರಿಂಗರ್ ಪ್ರಿಂಟ್ ತೆಗೆದುಕೊಂಡ ಮೇಲೆ ಆತನೇ ಆರೋಪಿ ಎಂಬುದು ಖಚಿತವಾಗಲಿದೆ. ಹೀಗಾಗಿ ಆತನನ್ನು ವಶಕ್ಕೆ ಪಡೆದುಕೊಳ್ಳಲು ಬೆಂಗಳೂರು ಪೊಲೀಸರು ಚಿತ್ತೂರಿಗೆ ಧಾವಿಸಿದ್ದಾರೆ. ಆದರೆ ಆತನೇ ಒಪ್ಪಿಕೊಂಡಂತೆ ಮೂರು ಕೊಲೆ, ಎರಡು ಕೊಲೆ ಯತ್ನ ಮತ್ತು ಹಲವು ಸುಲಿಗೆ ಪ್ರಕರಣಗಳಲ್ಲಿ ಆಂಧ್ರದ ಪೊಲೀಸರಿಗೆ ಈತ ಬೇಕಾಗಿರುವುದರಿಂದ, ಈಗಲೇ ಈತ ಬೆಂಗಳೂರು ಪೊಲೀಸರ ವಶಕ್ಕೆ ಸಿಗುವ ಸಾಧ್ಯತೆಗಳು ಕಡಿಮೆ ಎಂದು ಹೇಳಲಾಗುತ್ತಿದೆ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ನಡೆಯುತ್ತಿರುವ ಹೆಣ್ಣು ಭ್ರೂಣ ಹತ್ಯೆ ಬಗ್ಗೆ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ನವದೆಹಲಿ ದಟ್ಟ ಮಂಜು, ಹವಾಮಾನ ಎಫೆಕ್ಟ್‌, ಇಂದು ಕೂಡಾ ವಿಮಾನ ಪ್ರಯಾಣಿಕರಿಗೆ ಶಾಕ್

48 ಗಂಟೆ ಕೆಲಸ ಮಾಡಿದರೆ 3 ದಿನ ವೀಕಾಫ್: ಕೇಂದ್ರದಿಂದ ಕಾರ್ಮಿಕ ಹೊಸ ನಿಯಮ

ದರ್ಶನ್ ಅರೆಸ್ಟ್ ಆದಾಗ ಪುತ್ರ ವಿನೀಶ್ ಪರಿಸ್ಥಿತಿ ಹೇಗಾಗಿತ್ತು: ವಿವರಿಸಿದ ಪತ್ನಿ ವಿಜಯಲಕ್ಷ್ಮಿ

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ, ರಾಹುಲ್ ಗಾಂಧಿಗೆ ಬಿಗ್ ರಿಲೀಫ್

ಮುಂದಿನ ಸುದ್ದಿ
Show comments