Webdunia - Bharat's app for daily news and videos

Install App

ಅಕ್ರಮ ರಾಸಾಯನಿಕ ಗೊಬ್ಬರ ಮಾರಾಟ ಮಳಿಗೆ ಮೇಲೆ ದಾಳಿ

Webdunia
ಶುಕ್ರವಾರ, 10 ಫೆಬ್ರವರಿ 2023 (16:59 IST)
ಅಕ್ರಮವಾಗಿ ರಾಸಾಯನಿಕ ಗೊಬ್ಬರ ಮಾರಾಟ ಮಾಡುತ್ತಿದ್ದ ಮಳಿಗೆ ಮೇಲೆ ಕೃಷಿ ಇಲಾಖೆ ಸಹಾಯಕ ನಿರ್ದೇಶಕರು ದಾಳಿ ಮಾಡಿದ್ದಾರೆ. ತುಮಕೂರು ಜಿಲ್ಲೆ ಪಾವಗಡ ಪಟ್ಟಣದಲ್ಲಿ ದಾಳಿ ನಡೆದಿದ್ದು, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪುಟ್ಟರಂಗಪ್ಪ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ರೇಖಾ ಆಗ್ರೋ ಸರ್ವಿಸಸ್ ಕೀಟನಾಶಕ ಎಂಬ ಮಳಿಗೆ ಮೇಲೆ ದಾಳಿ ಮಾಡಿದ್ದಾರೆ. ಮಳಿಗೆಯಲ್ಲಿ ಅನುಮತಿ ಇಲ್ಲದ ಬ್ರೋನೋಪೋಲ್, ಬ್ರೋರಾನ್2, ನೈಟ್ರೋಪೇನ್ 1, ಡಿಯೋಲ್ ರಸಗೊಬ್ಬರವನ್ನ ಮಾರಾಟ ಮಾಡಲಾಗುತ್ತಿತ್ತು ಎಂದು ಪುಟ್ಟರಂಗಪ್ಪ ತಿಳಿಸಿದ್ದಾರೆ. ದಾಳಿಯಲ್ಲಿ 2,204 ಕೆಜಿ ರಸಗೊಬ್ಬರವನ್ನ ಜಪ್ತಿ ಮಾಡಿಕೊಳ್ಳಲಾಗಿದೆ. 1,56,500 ರೂಪಾಯಿ ಮೌಲ್ಯದ ಅನುಮತಿ ಇಲ್ಲದ ರಸಗೊಬ್ಬರವನ್ನ ಮಾಲೀಕ ಮಾರಾಟ ಮಾಡಿದ್ದಾನೆ. ಮಳಿಗೆ ಮಾಲೀಕರ ವಿರುದ್ಧ ಕೀಟನಾಶಕ ಕಾಯ್ದೆ 1968ರ ಅಡಿಯಲ್ಲಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments