Webdunia - Bharat's app for daily news and videos

Install App

ನಡುರಸ್ತೆಯಲ್ಲಿ ಯುವಕನ ಮೇಲೆ ದಾಳಿ

Webdunia
ಮಂಗಳವಾರ, 21 ಮಾರ್ಚ್ 2023 (17:17 IST)
ಇಸ್ಪೀಟ್ ಆಟ ಆಡಿಸುವ ಗುಂಪುಗಳ ನಡುವೆ ಮತ್ತೆ ಮಾರಾಮಾರಿ ನಡೆದ ಘಟನೆ ಕೊಪ್ಪಳದಲ್ಲಿ ನಡೆದಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದ ಸಿಂಧನೂರು ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಹಾಡುಹಗಲೇ ನಡುರಸ್ತೆಯಲ್ಲಿ ಯುವಕನ ಮೇಲೆ ಗುಂಪೊಂದು ದಾಳಿ ಮಾಡಿದೆ.. ತಲೆಮೇಲೆ ಕಲ್ಲು ಎತ್ತಿಹಾಕಿ ಕೊಲೆಗೆ ಯತ್ನಿಸಿದ್ದಾರೆ. ಗಂಗಾವತಿಯ ಅಮರಭಗತ್ ಸಿಂಗ್ ನಗರದ ಮಾರುತಿ ಕೊಲೆ ಯತ್ನಕ್ಕೆ ಒಳಗಾದ ಯುವಕ. ಆತನ ಸ್ಥಿತಿ ಚಿಂತಾಜನಕವಾಗಿದ್ದು, ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಭಾನುವಾರ ಸಂಜೆ ಐದು ಗಂಟೆಗೆ ಸುಮಾರು 10ಕ್ಕೂ ಹೆಚ್ಚು ಯುವಕರ ಗುಂಪೊಂದು ಸ್ಕೂಟಿ ಮೇಲೆ ಹೊರಟಿದ್ದ ಯುವಕನನ್ನು ತಡೆದು ಹಲ್ಲೆ ಮಾಡಿದ್ದಾರೆ. ಹಲ್ಲೆ ನಂತರ ಯುವಕ ರಸ್ತೆ ಮೇಲೆ ಬಿದ್ದಿದ್ದ. ಆದರೂ ಬಿಡದ ಆರೋಪಿಗಳು ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆಗೆ ಯತ್ನಿಸಿದ್ದಾರೆ. ಬಸ್, ಕಾರು ಮತ್ತು ಬೈಕ್ ಮೇಲಿದ್ದ ಜನ ಘಟನೆಯನ್ನು ಮೂಕ ಪ್ರೇಕ್ಷಕರಂತೆ ನೋಡಿಕೊಂಡು ನಿಂತಿದ್ದರು. ಈ ಭಯಾನಕ ದೃಶ್ಯ ಕಂಡು ಜನ ಬೆಚ್ಚಿಬಿದ್ದಿದ್ದಾರೆ. ತಲೆ ಮೇಲೆ ಕಲ್ಲು ಎತ್ತಿ ಹಾಕುವ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಡಾ ಹಗರಣದಲ್ಲಿ ಸಿಎಂ ಪತ್ನಿಗೆ ರಿಲೀಫ್: ಇಡಿಗೆ ಸುಪ್ರೀಂಕೋರ್ಟ್ ಛೀಮಾರಿ

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಧರ್ಮಸ್ಥಳ ಮಂಜುನಾಥನಿಗೆ ಕೆಟ್ಟ ಹೆಸರು ತಂದ್ರೆ ಈ ಸರ್ಕಾರ ಸರ್ವನಾಶವಾಗುತ್ತದೆ: ಜನಾರ್ಧನ ರೆಡ್ಡಿ

ಕಂಪ್ಯೂಟರ್ ಮುಂದೆ ಕೆಲಸ ಮಾಡುವವರು ಡಾ ಭುಜಂಗ ಶೆಟ್ಟಿ ನೀಡಿದ್ದ ಈ ಸಲಹೆ ಗಮನಿಸಿ

ಮುಂದಿನ ಸುದ್ದಿ
Show comments