Publish Date: Thu, 31 Mar 2022 (20:53 IST)
Updated Date: Thu, 31 Mar 2022 (20:56 IST)
ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಮನೆಯ ಮೇಲೆ ನಡೆದ ದಾಳಿಗೆ 8 ಜನರನ್ನು ದೆಹಲಿ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಬುಧವಾರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಮೇಲೆ ದುಷ್ಕರ್ಮಿಗಳ ಗುಂಪೊಂದು ದಾಳಿ ನಡೆಸಿತ್ತು. ದೆಹಲಿ ಕೇಜ್ರಿವಾಲ್ ಅವರ ನಿವಾಸದ ಭದ್ರತಾ ಆಸ್ತಿಗಳನ್ನು ಬಿಜೆಪಿ ಸಿಎಂ ಕಾರ್ಯಕರ್ತರು ಧ್ವಂಸಗೊಳಿಸಿದ್ದಾರೆ. ಸಿಸಿಟಿವಿ ಕ್ಯಾಮೆರಾಗಳು ಮತ್ತು ಭದ್ರತಾ ತಡೆಗೋಡೆಗಳು ಧ್ವಂಸವಾಗಿದೆ. ಈ ಮೂಲಕ ಕೇಜ್ರಿವಾಲ್ ಹತ್ಯೆಗೆ ಬಿಜೆಪಿ ಯತ್ನಿಸಿದೆ ಎಂದು ಆಪ್ ಪ್ರಮುಖ ಆರೋಪಿಸಿದ್ದರು. ಘಟನೆಗೆ ಸಂಬಂಧಿಸಿದಂತೆ ಇನ್ನೂ ಕೆಲವರ ಪತ್ತೆಗಾಗಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 6 ಪೊಲೀಸರ ತಂಡವೊಂದು ಘಟನೆಗೆ ಸಂಬಂಧಿಸಿ ತನಿಖೆ ಕೈಗೊಂಡಿದೆ