ಇಂದು ಶಾಸಕರ ಬೇನಾಮಿ ಆಸ್ತಿ ಮೇಲೂ ದಾಳಿ ಸಾಧ್ಯತೆ

Webdunia
ಶನಿವಾರ, 4 ಮಾರ್ಚ್ 2023 (10:11 IST)
ದಾವಣಗೆರೆ : ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಲೋಕಾಯುಕ್ತ ದಾಳಿಗೊಳಗಾಗಿದ್ದು, ಮಾಡಾಳ್ ವಿರೂಪಾಕ್ಷಪ್ಪ ಸೇರಿದ ನಿವಾಸ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು,
 
ಶಾಸಕರ ನಿವಾಸ ಮಾಡಾಳ್ ಗ್ರಾಮದಲ್ಲಿರುವ ನಿವಾಸಕ್ಕೆ ಲೋಕಾಯುಕ್ತ ಅಧಿಕಾರಿಗಳು ಬೆಳಗ್ಗೆಯಿಂದ ಸತತ 11 ಗಂಟೆಗಳ ಕಾಲ ನಿರಂತರವಾಗಿ ತಲಾಶ್ ನಡೆಸಿದ್ದು, ಹತ್ತು ಲಕ್ಷಕ್ಕೂ ಹೆಚ್ಚು ನಗದು ಹಾಗೂ ಆಭರಣ ಸಿಕ್ಕಿವೆ.

ಬೆಂಗಳೂರಿನಲ್ಲಿ ದಾಳಿ ನಡೆಸಿದ 17 ಗಂಟೆಗಳ ನಂತರ ಶಾಸಕರ ಸ್ವ ಗ್ರಾಮದಲ್ಲಿ ದಾಳಿ ನಡೆಸಿದ್ದು, ಬೆಟ್ಟ ಬಗೆದು ಹೆಗ್ಗಣ ಹಿಡಿದಂತಾಗಿದೆ. ಅಲ್ಲದೆ ಅಪಾರ ಪ್ರಾಮಾಣದ ಬೇನಾಮಿ ಆಸ್ತಿಯ ಬಗ್ಗೆ ಹೊಗೆಯಾಡುತ್ತಿದೆ.

ಚನ್ನಗಿರಿ ಕ್ಷೇತ್ರ ಎಂದರೆ ಮಾಡಾಳ್ ವಿರೂಪಾಕ್ಷಪ್ಪ, ಮಾಡಾಳ್ ವಿರೂಪಾಕ್ಷಪ್ಪ ಎಂದರೆ ಬಿಜೆಪಿ ಭದ್ರ ಕೋಟೆ. ಆದರೆ ಇದೀಗ ಚುನಾವಣೆ ಸಮೀಪದಲ್ಲೇ ಲೋಕಾಯುಕ್ತ ಶಾಕ್ ಕೊಟ್ಟಿದೆ. ಲಂಚ ಪಡೆಯುವಾಗಲೇ ಶಾಸಕರ ಪುತ್ರ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿರೋದು ಶಾಸಕರನ್ನು ಬುಡಮೇಲಾಗಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದುನಿಯಾ ವಿಜಯ್‌ಗೆ ಸಿದ್ದರಾಮಯ್ಯ ಸರ್ಕಾರದಿಂದ ಸಿಕ್ತು ಭರ್ಜರಿ ಗಿಫ್ಟ್‌

₹7 ಲಕ್ಷದ ಕಾರಿಗೆ ಬರೋಬ್ಬರಿ 2ಕೋಟಿಯ ನಂಬರ್ ಪ್ಲೇಟ್ ಖರೀದಿಸಿದ ವ್ಯಕ್ತಿ

ಮಾದಕ ವ್ಯಸನಿ ತಂದೆಯಿಂದಲೇ ಕೊಲೆಯಾದ ಮಗಳು, ಮಂಜೇಶ್ವರದಲ್ಲಿ ಕರುಣಾಜನಕ ಸ್ಟೋರಿ

ನಿಪಾ ವೈರಸ್: ಕರ್ನಾಟಕದಲ್ಲಿ ಹೈ ಅಲರ್ಟ್‌

ವಾಟ್ಸ್‌ಆ್ಯಪ್‌ನ ಗೌಪ್ಯತೆ ಉಲ್ಲಂಘನೆಯಾದರೆ ಸಹಿಸುವುದಿಲ್ಲ: ಮೆಟಾ ಸಂಸ್ಥೆಗೆ ಸುಪ್ರೀಂ ಖಡಕ್‌ ವಾರ್ನಿಂಗ್‌

ಮುಂದಿನ ಸುದ್ದಿ
Show comments