Webdunia - Bharat's app for daily news and videos

Install App

ಅಕ್ರಮವಾಗಿ ಕಸಾಯಿಖಾನೆ ನಡೆಯುತ್ತಿದ್ದ ಸ್ಥಳಕ್ಕೆ ದಾಳಿ

Webdunia
ಶುಕ್ರವಾರ, 27 ಆಗಸ್ಟ್ 2021 (19:04 IST)
ಅಕ್ರಮವಾಗಿ ಕಸಾಯಿಖಾನೆ ನಡೆಯುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ನಡೆದಿದೆ.
ಕಡಬ ಗ್ರಾಮದ ಕಳಾರ ಎಂಬಲ್ಲಿ ಮಹಮ್ಮದ್ ಇಸ್ಮಾಯಿಲ್ ಎಂಬುವವರ ಹಳೆಯ ಮನೆಯ ಹಿಂಬದಿಯ ಶೆಡ್ ವೊಂದರಲ್ಲಿ ಅಕ್ರಮವಾಗಿ ದನದ ಮಾಂಸ ಮಾಡುತ್ತಿರುವ ಕುರಿತು ಬಂದ ಮಾಹಿತಿ ಮೇರೆಗೆ ಈ ದಾಳಿ ನಡೆಸಲಾಗಿದೆ. ಅಕ್ರಮವಾಗಿ ಮಾಂಸ ಮಾಡುತ್ತಿದ್ದ ಮೂವರು ವ್ಯಕ್ತಿಗಳು ಓಡಿ ಪರಾರಿಯಾಗಲು ಯತ್ನಿಸಿದ್ದು ಆರೋಪಿತ ಅಬ್ದುಲ್ ರಹಿಮಾನ್ ಎಂಬಾತನನ್ನು ಬೆನ್ನಟ್ಟಿ ಹಿಡಿದು ವಶಕ್ಕೆ ಪಡೆದಿದ್ದಾರೆ. ಅಕ್ರಮವಾಗಿ ಯಾವುದೇ ಪರವಾನಗಿ ಇಲ್ಲದೇ ದನದ ಕರುವನ್ನು ಕಡಿದು ಮಾಂಸ ಮಾಡುತ್ತಿದ್ದ ಸ್ಥಳದಲ್ಲಿದ್ದ ಪ್ಲಾಸ್ಟಿಕ್ ಟಾರ್ಪಾಲಿನಲ್ಲಿದ್ದ ಸುಮಾರು 40 ಕೆಜಿಯಷ್ಟು ದನದ ಮಾಂಸ, ದನದ ನಾಲ್ಕು ಕಾಲುಗಳ ಕಳೆ‌ ಬರಹ, ಎಲೆಕ್ಟ್ರಾನಿಕ್ ತೂಕ ಮಾಪನ 1, ಕಬ್ಬಿಣದ ಸತ್ತಾರ್ ಕತ್ತಿಗಳು 2,  ಕಬ್ಬಿಣದ ಚೂರಿಗಳು 3, ಕಾಟು ಮರದ ತುಂಡು 1, ಶೆಡ್ ನ ಹೊರಗಡೆ ಕಟ್ಟಿ ಹಾಕಿದ್ದ ನಾಲ್ಕು ದನದ ಕರುಗಳನ್ನು ವಶಕ್ಕೆ ಪಡೆಯಲಾಗಿದೆ. ಸ್ವಾಧೀನಪಡಿಸಿಕೊಂಡ ದನ ಕರುವಿನ ಮಾಂಸ ಹಾಗೂ ಜೀವಂತ ದನದ ಕರುಗಳ ಅಂದಾಜು ಮೌಲ್ಯ 19, 500 ಆಗಬಹುದು ಎಂದು ಹೇಳಲಾಗಿದೆ. ಆರೋಪಿತರಾದ ಮಹಮ್ಮದ್ ಶರೀಫ್ ಮತ್ತು ಮಹಮ್ಮದ್ ಮುಸ್ತಫಾ ಎಂಬುವವರು ಓಡಿ ಪರಾರಿಯಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments