Webdunia - Bharat's app for daily news and videos

Install App

ಬಿರಿಯಾನಿ ಸಪ್ಲೈ ತಡವಾಗಿದ್ದಕ್ಕೆ ಹಲ್ಲೆ

Webdunia
ಶುಕ್ರವಾರ, 11 ನವೆಂಬರ್ 2022 (17:24 IST)
ಬಿರಿಯಾನಿ ಕೊಡಲು ರೆಸ್ಟೋರೆಂಟ್ ಸಿಬ್ಬಂದಿ ತಡ ಮಾಡಿದ್ದಕ್ಕೆ ಸಿಟ್ಟಿಗೆದ್ದು ಮೂವರು ವ್ಯಕ್ತಿಗಳು ಸಿಬ್ಬಂದಿಗೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಗ್ರೇಟರ್ ನೋಯ್ಡಾದ ಅನ್ಸಲ್ ಪ್ಲಾಜಾ ಮಾಲ್‍ನಲ್ಲಿರುವ ರೆಸ್ಟೋರೆಂಟ್‍ನಲ್ಲಿ ಬುಧವಾರ ರಾತ್ರಿ 10: 30 ರ ಸುಮಾರಿಗೆ ಈ ಘಟನೆ ನಡೆದಿದೆ. ಹಲ್ಲೆ ನಡೆಸಿದ್ದವರನ್ನು ಬಂಧಿಸಲಾಗಿದೆ. ಬಂಧಿತರನ್ನು ಮನೋಜ್, ರರವೇಶ್ ಮತ್ತು ಕ್ರಿಶ್ ಎಂದು ಗುರುತಿಸಲಾಗಿದೆ. ಇವರೆಲ್ಲರೂ ದಾದ್ರಿ ನಿವಾಸಿಗಳು. ಸಿಬ್ಬಂದಿಗೆ ಥಳಿಸುತ್ತಿರುವ ದೃಶ್ಯವು ರೆಸ್ಟೋರೆಂಟ್ CCTVಯಲ್ಲಿ ಸೆರೆಯಾಗಿದ್ದು, ಈ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ವೀಡಿಯೋದಲ್ಲಿ ರೆಸ್ಟೋರೆಂಟ್​​​ನ ಟೇಬಲ್​​​ನಲ್ಲಿ ಮೂವರು ಯುವಕರು ಕುಳಿತಿರುವುದನ್ನು ಕಾಣಬಹುದಾಗಿದೆ. ಸ್ವಲ್ಪ ಹೊತ್ತಿನವರೆಗೆ ಕುಳಿತಿದ್ದ ಅವರಲ್ಲಿ ಓರ್ವ ಇದ್ದಕ್ಕಿದ್ದಂತೆ ಎದ್ದು, ಕಂಪ್ಯೂಟರ್ ಮುಂದೆ ಕುಳಿತು ಕೆಲಸ ಮಾಡುತ್ತಿದ್ದ ಸಿಬ್ಬಂದಿ ಮೇಲೆ ಏಕಾಏಕಿ ಹಲ್ಲೆ ಮಾಡಿದ್ದಾನೆ. ನಂತರ ಆತನ ಕುತ್ತಿಗೆಯನ್ನು ಹಿಡಿದು ಎಳೆದುಕೊಂಡು ಬಂದು ಚೆನ್ನಾಗಿ ಥಳಿಸಿದ್ದಾನೆ. ಇಷ್ಟು ಮಾತ್ರವಲ್ಲದೆ ಸಿಬ್ಬಂದಿಯನ್ನು ರೆಸ್ಟೋರೆಂಟ್‍ನಿಂದ ಹೊರಗೆಳೆದುಕೊಂಡು ಬಂದು ಮೂವರು ಒದ್ದು, ಥಳಿಸಿದ್ದಾರೆ. ಈ ಸಂಬಂಧ ನಾಲೆಡ್ಜ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ IPC ಸೆಕ್ಷನ್ 323 ಮತ್ತು 147ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಅಣ್ಣಾಮಲೈಗೆ ಮುಂದಿನ ಎಲೆಕ್ಷನ್‌ನಲ್ಲೂ ಟಿಕೆಟ್‌ ಡೌಟ್‌, ಕಾರಣ ಇಲ್ಲಿದೆ

ಧರ್ಮಸ್ಥಳ ಉತ್ಖನನ ವೇಳೆ ಕಂಡಿದ್ದೇನು: ಬಿಗ್ ಟ್ವಿಸ್ಟ್

ರಾಹುಲ್ ಗಾಂಧಿಯ ಚುನಾವಣಾ ಅಕ್ರಮ ಪ್ರತಿಭಟನೆ ಕಪಟ ನಾಟಕ: ಬಿವೈ ವಿಜಯೇಂದ್ರ

ನನ್ನನ್ನು ನಾನು ದ್ವೇಷಿಸುತ್ತೇನೆ, ನಾನು ಸೋತವನು: ಹೀಲಿಯಂ ಅನಿಲ ಸೇವಿಸಿ ಸಿಎ ಆತ್ಮಹತ್ಯೆ

ಧರ್ಮಸ್ಥಳದಲ್ಲಿ ಎರಡನೇ ದಿನ ಹುಡುಕಾಡುತ್ತಿರುವ ಎಸ್ಐಟಿ ತಂಡಕ್ಕೆ ಸಿಕ್ಕಿದ್ದೇನು

ಮುಂದಿನ ಸುದ್ದಿ
Show comments