Select Your Language

Notifications

webdunia
webdunia
webdunia
webdunia

ಸಾಲ ವಾಪಸ್ ಕೇಳಿದ್ದಕ್ಕೆ ಬ್ಯಾಟ್ ನಿಂದ ಹಲ್ಲೆ

ಸಾಲ ವಾಪಸ್ ಕೇಳಿದ್ದಕ್ಕೆ ಬ್ಯಾಟ್ ನಿಂದ ಹಲ್ಲೆ
bangalore , ಮಂಗಳವಾರ, 23 ಆಗಸ್ಟ್ 2022 (18:17 IST)
ಸಾಲದ ಹಣ ವಾಪಾಸ್ ಕೇಳಿದ್ದ ವ್ಯಕ್ತಿಯನ್ನು ಕೊಲೆ  ಮಾಡಿರುವ ಘಟನೆ ಮುನ್ನೆಕೊಳಲು ಸಮೀಪದ ಜೆಆರ್​ಎಂ ಅಪಾರ್ಟ್​​ಮೆಂಟ್​​ನಲ್ಲಿ ನಡೆದಿದೆ. ವೆಂಕಟೇಶಪ್ಪ  ಕೊಲೆಯಾದ ದುರ್ದೈವಿ. ಕೊಲೆಯಾದ ವೆಂಕಟೇಶಪ್ಪ, ಶಿವಪ್ಪ ಅಲಿಯಾಸ್ ಮೇಷ್ಟ್ರು ಎಂಬವರಿಗೆ ನಂಜುಂಡ ರೆಡ್ಡಿ ಹಾಗೂ ಪ್ರಕಾಶ್ ಎಂಬವರ ಕಡೆಯಿಂದ ಸಾಲ‌ ಕೊಡಿಸಿದ್ದರು. ಈ ಸಾಲಕ್ಕೆ ಸಂಬಂಧಿಸಿದಂತೆ ಶಿವಪ್ಪ ನೀಡಿದ್ದ ಚೆಕ್ ಬೌನ್ಸ್ ಆಗಿತ್ತು.
ಈ ಸಂಬಂಧ ಸಾಲಗಾರರೊಂದಿಗೆ ಶಿವಪ್ಪ ವಾಸವಾಗಿದ್ದ ಅಪಾರ್ಟ್​​ಮೆಂಟ್ ಬಳಿಗೆ ತೆರಳಿದ್ದರು. ಈ ವೇಳೆ ಕ್ರಿಕೆಟ್​ ಬ್ಯಾಟ್​​ನಿಂದ ಹೊಡೆದು ಕೊಲೆ ಮಾಡಲಾಗಿದೆ. ಕೊಲೆಯ ಬಳಿಕ ಶಿವಪ್ಪ ಎಸ್ಕೇಪ್ ಆಗಿದ್ದಾನೆ. ಹತ್ಯೆಯ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಈ ಸಂಬಂಧ ಮಾರತ್​ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದು, ಸ್ಥಳೀಯರಿಂದ ಮತ್ತು ನಂಜುಂಡ ರೆಡ್ಡಿ ಹಾಗೂ ಪ್ರಕಾಶ್ ಅವರಿಂದ ಹೇಳಿಕೆ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಗ್ರಾಮಸ್ಥರ ಮೇಲೆ ನರಿಗಳ ದಾಳಿ