Webdunia - Bharat's app for daily news and videos

Install App

ತಂಬಾಕು ನಿಯಂತ್ರಣ ತನಿಖಾ ತಂಡದಿಂದ ದಾಳಿ

Webdunia
ಬುಧವಾರ, 19 ಡಿಸೆಂಬರ್ 2018 (18:54 IST)
ಸಾರ್ವಜನಿಕರಲ್ಲಿ ತಂಬಾಕು ದುಷ್ಪರಿಣಾಮ ಕುರಿತು ಅರಿವು ಮೂಡಿಸಲು  ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಜಿಲ್ಲಾ ತಂಬಾಕು ನಿಯಂತ್ರಣ ವಿಶೇಷ ತಂಡದಿಂದ ತಂಬಾಕು ದಾಳಿ ನಡೆಸಲಾಯಿತು.

ಧೂಮಪಾನ ಮುಕ್ತ ನಗರವೆಂದು ಘೋಷಿಸುವ ಹಾಗೂ ಸಾರ್ವಜನಿಕರಲ್ಲಿ ತಂಬಾಕು ದುಷ್ಪರಿಣಾಮ ಕುರಿತು ಅರಿವು ಮೂಡಿಸಲು ನಗರದ ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಜಿಲ್ಲಾ ತಂಬಾಕು ನಿಯಂತ್ರಣ ವಿಶೇಷ ತಂಡದಿಂದ ತಂಬಾಕು ದಾಳಿ ನಡೆಸಲಾಯಿತು.

ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಬಾಲ ಕಾರ್ಮಿಕರ ಯೋಜನೆ, ಮಹಾನಗರ ಪಾಲಿಕೆ, ಶಿಕ್ಷಣ ಇಲಾಖೆ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಹಾಗೂ ಪೊಲೀಸ್ ಇಲಾಖೆ ಇವರ ಸಹಯೋಗದೊಂದಿಗೆ ಕಾರ್ಯಾಚರಣೆ ಹಮ್ಮಿಕೊಳ್ಳಲಾಗಿತ್ತು. ದಾವಣಗೆರೆ ಅಪರ ಜಿಲ್ಲಾಧಿಕಾರಿ ಪದ್ಮಾ ಬಸವಂತಪ್ಪ ನೇತೃತ್ವದಲ್ಲಿ ತಂಡ ರಚಿಸಿಕೊಂಡು ಸಿಗರೇಟು ಮತ್ತು ಇತರ ತಂಬಾಕು ಉತ್ಪನ್ನಗಳ ಅಧಿನಿಯಮ-2003 ಸೆಕ್ಷನ್ 4 ಮತ್ತು 6 ಅಡಿಯಲ್ಲಿ ಆರೋಗ್ಯ ಇಲಾಖೆ, ಮಹಾನಗರಪಾಲಿಕೆ ವತಿಯಿಂದ ಒಟ್ಟು 53 ಪ್ರಕರಣಗಳನ್ನು ದಾಖಲಿಸಿ, ರೂ. 5550/- ಗಳನ್ನು ದಂಡದ ರೂಪದಲ್ಲಿ ಸ್ಥಳದಲ್ಲಿಯೇ ಸಂಗ್ರಹಿಸಲಾಯಿತು.

ತಂಡವು ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಹೊಟೇಲ್, ಬಾರ್ ಮತ್ತು ರೆಸ್ಟೋರೆಂಟ್, ಪಾನ್ಶಾಪ್, ಬಸ್ ನಿಲ್ದಾಣ ಇತ್ಯಾದಿ ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳನ್ನು ಮಾರುವವರು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳನ್ನು ಸೇವಿಸುವವವರಿಗೆ ಸ್ಥಳದಲ್ಲಿಯೇ ದಂಡ ಹಾಕುವ ಮೂಲಕ ಜಾಗೃತಿ ಮೂಡಿಸಿದರು.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

Video, ನಿನ್ನ ಗುರುತೇ ಸಿಗದ ಹಾಗೇ ಮಾಡುತ್ತೇನೆ: ಗ್ಯಾಸ್ ಸ್ಟೇಷನ್ ಸಿಬ್ಬಂದಿಗೆ ಮಹಿಳೆ ಗನ್ ಪಾಯಿಂಟ್‌

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಬಿಜೆಪಿ ಗೂಂಡಾಗಳೇ ಕಾರಣ: ಕಾಂಗ್ರೆಸ್ ನಾಯಕ ಎಂ ಲಕ್ಷ್ಮಣ್

ಮುಂದಿನ ಸುದ್ದಿ
Show comments