Select Your Language

Notifications

webdunia
webdunia
webdunia
webdunia

ಯುವಕರ ಮೇಲೆ ಕಾರ್ ಹತ್ತಿಸಿ ಕೊಲೆ ಯತ್ನ

ಯುವಕರ ಮೇಲೆ ಕಾರ್ ಹತ್ತಿಸಿ ಕೊಲೆ ಯತ್ನ
mysooru , ಮಂಗಳವಾರ, 6 ಡಿಸೆಂಬರ್ 2022 (18:08 IST)
ಬುದ್ದಿ ಹೇಳಿದ ಯುವಕರ ಮೇಲೆ ಕಾರು ಹತ್ತಿಸಿ ಕೊಲೆ ಯತ್ನ ಮಾಡಿರುವ ಘಟನೆ ಮೈಸೂರಿನ ಸರಸ್ವತಿ ಪುರಂನಲ್ಲಿ ನಡೆದಿದೆ. ಪ್ರಜ್ವಲ್, ರಾಹುಲ್, ಆನಂದ್ ಎಂಬುವವರ ಮೇಲೆ ಕಾರು ಹತ್ತಿಸಲು ಪ್ರಯತ್ನಿಸಿ ಹಲ್ಲೆ‌ ಮಾಡಲಾಗಿದೆ. ಟಿ.ಕೆ. ಬಡಾವಣೆಯ ಜಂಕ್ಷನ್​​​​​ನಲ್ಲಿ ಫಾರ್ಚುನರ್ ಕಾರು ವೇಗವಾಗಿ ಬಂದು ಮೂರು ಜನ ಯುವಕರಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಯುವಕರು ಪ್ರಶ್ನೆ ಮಾಡಿದ್ದಕ್ಕೆ ಫಾರ್ಚುನರ್ ಕಾರಿನಲ್ಲಿದ್ದ ವಾಸು ಹಾಗೂ ಅವರ ಪುತ್ರ ದರ್ಶನ್ ಆ ಯುವಕರ ಮೇಲೆ ಹಲ್ಲೆ ಮಾಡಿದ್ದಾರೆ. ​ಅಪ್ಪ ಮಗನ ದರ್ಪಕ್ಕೆ 3 ಜನರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಗಾಯಾಳು ಪ್ರಜ್ವಲ್ ಸ್ಥಿತಿ ಚಿಂತಾಜನಕವಾಗಿದೆ.  ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದರೂ, ಅಪ್ಪ-ಮಗನ ವಿರುದ್ದ ಕ್ರಮ ತೆಗೆದುಕೊಳ್ಳಲು ಪೊಲೀಸರು ಮೀನಾಮೇಷ ಎಣಿಸುತ್ತಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

ಆನೆಗೆ ಕಬ್ಬು ನೀಡಿದ್ದಕ್ಕೆ 75 ಸಾವಿರ ದಂಡ