Webdunia - Bharat's app for daily news and videos

Install App

ಯುವಕರ ಮೇಲೆ ಕಾರ್ ಹತ್ತಿಸಿ ಕೊಲೆ ಯತ್ನ

Webdunia
ಮಂಗಳವಾರ, 6 ಡಿಸೆಂಬರ್ 2022 (18:08 IST)
ಬುದ್ದಿ ಹೇಳಿದ ಯುವಕರ ಮೇಲೆ ಕಾರು ಹತ್ತಿಸಿ ಕೊಲೆ ಯತ್ನ ಮಾಡಿರುವ ಘಟನೆ ಮೈಸೂರಿನ ಸರಸ್ವತಿ ಪುರಂನಲ್ಲಿ ನಡೆದಿದೆ. ಪ್ರಜ್ವಲ್, ರಾಹುಲ್, ಆನಂದ್ ಎಂಬುವವರ ಮೇಲೆ ಕಾರು ಹತ್ತಿಸಲು ಪ್ರಯತ್ನಿಸಿ ಹಲ್ಲೆ‌ ಮಾಡಲಾಗಿದೆ. ಟಿ.ಕೆ. ಬಡಾವಣೆಯ ಜಂಕ್ಷನ್​​​​​ನಲ್ಲಿ ಫಾರ್ಚುನರ್ ಕಾರು ವೇಗವಾಗಿ ಬಂದು ಮೂರು ಜನ ಯುವಕರಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಯುವಕರು ಪ್ರಶ್ನೆ ಮಾಡಿದ್ದಕ್ಕೆ ಫಾರ್ಚುನರ್ ಕಾರಿನಲ್ಲಿದ್ದ ವಾಸು ಹಾಗೂ ಅವರ ಪುತ್ರ ದರ್ಶನ್ ಆ ಯುವಕರ ಮೇಲೆ ಹಲ್ಲೆ ಮಾಡಿದ್ದಾರೆ. ​ಅಪ್ಪ ಮಗನ ದರ್ಪಕ್ಕೆ 3 ಜನರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಗಾಯಾಳು ಪ್ರಜ್ವಲ್ ಸ್ಥಿತಿ ಚಿಂತಾಜನಕವಾಗಿದೆ.  ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದರೂ, ಅಪ್ಪ-ಮಗನ ವಿರುದ್ದ ಕ್ರಮ ತೆಗೆದುಕೊಳ್ಳಲು ಪೊಲೀಸರು ಮೀನಾಮೇಷ ಎಣಿಸುತ್ತಿದ್ದಾರೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments