Select Your Language

Notifications

webdunia
webdunia
webdunia
webdunia

ಶಾಂತಿ ಕದಡುವ ಪ್ರಯತ್ನ: ರೇಣುಕಾಚಾರ್ಯ

ಶಾಂತಿ ಕದಡುವ ಪ್ರಯತ್ನ: ರೇಣುಕಾಚಾರ್ಯ
ಬೆಂಗಳೂರು , ಮಂಗಳವಾರ, 8 ಫೆಬ್ರವರಿ 2022 (12:34 IST)
ಬೆಂಗಳೂರು : ಕರ್ನಾಟಕ ಶಾಂತಿಗೆ ಹೆಸರಾದ ರಾಜ್ಯ. ಆದರೆ ಇಲ್ಲಿ ಕೆಲವರು ಶಾಂತಿ ಕದಡುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಶಾಸಕ ರೇಣುಕಾಚಾರ್ಯ ಕಿಡಿಕಾರಿದರು.
 
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಲಾ ಕಾಲೇಜುಗಳಲ್ಲಿ ಸಮವಸ್ತ್ರ ಧರಿಸಲು ಈ ಹಿಂದೆ ಕೇರಳ ಹೈಕೋರ್ಟ್ ಹೇಳಿದೆ. ಜೊತೆಗೆ ನಮ್ಮ ಸರ್ಕಾರ ಕೂಡಾ ಹೇಳಿದೆ. ಆದೇಶಗಳನ್ನು ನಾವು ಪಾಲಿಸಬೇಕು.

ಹೈಕೋರ್ಟ್ ಹೇಳುವುದನ್ನು ನಾವು ಕೇಳಬೇಕು. ಕಾಂಗ್ರೆಸ್ ನಾಯಕರು ಬಿಜೆಪಿ ಸರ್ಕಾರವನ್ನು ಅಸ್ಥಿರ ಮಾಡಲು ಈ ರೀತಿಯ ಪ್ರಯತ್ನ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಅಲ್ಪಸಂಖ್ಯಾತ ಮುಖಂಡರು ಇಂತಹ ವಿಚಾರಗಳಿಗೆ ಪ್ರಚೋದನೆ ನೀಡಬಾರದು. ಕಾಲೇಜು ಆವರಣದಲ್ಲಿ ಧಾರ್ಮಿಕ ಸಮವಸ್ತ್ರ ಬೇಡ. ಹೀಗಾಗಿ ಎರಡು ಸಮುದಾಯದ ವಿದ್ಯಾರ್ಥಿಗಳು ನ್ಯಾಯಲಯ ಮತ್ತು ಸರ್ಕಾರ ಆದೇಶ ಪಾಲಿಸಬೇಕು

ಹಿಜಬ್ ವಿವಾದದ ಕುರಿತು ಸುನಿಲ್ ಕುಮಾರ್, ಈಶ್ವರಪ್ಪ ಪ್ರಚೋದನೆ ನೀಡಿಲ್ಲ. ಸರ್ಕಾರದ ನಿಯಮ ಪಾಲಿಸಲು ಹೇಳಿದ್ದಾರೆ. ರಾಹುಲ್ ಗಾಂಧಿ, ಸಿದ್ದರಾಮಯ್ಯ ಅವರು ಮೂಲಭೂತ ಹಕ್ಕುಗಳು ಎಂದು ಪ್ರಚೋದನೆ ನೀಡುತ್ತಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾಪಡೆ!